ಹೆಚ್ಚು ಕೆಲಸ ಶಿಸ್ತು ಬದ್ಧ ಜೀವನ ನಾಯಕನ ಗುಣವಾಗಬೇಕು : ಸಂದೀಪ್ ಕುಮಾರ್ ಮಂಜ
Thumbnail
ಉಡುಪಿ : ನಾಯಕತ್ವ ಎಂಬುದು ಜವಾಬ್ದಾರಿಯಾಗಿದೆ ಇದು ಅಧಿಕಾರ ಎಂದು ತಿಳಿಯದೆ, ಹೆಚ್ಚು ಕೆಲಸ ಶಿಸ್ತು ಬದ್ಧ ಜೀವನ ನಾಯಕನ ಗುಣವಾಗಬೇಕು ಎಂದು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ , ಪೂವ೯ ರಾಷ್ಟ್ರೀಯ ಉಪಾಧ್ಯಕ್ಷ ಸಂದೀಪ್ ಕುಮಾರ್ ಮಂಜ ಹೇಳಿದರು. ಅವರು ಜೇಸಿಐ ಉಡುಪಿ ಸಿಟಿ ಇದರ ವತಿಯಿಂದ ಸಿ.ಎಸ್.ಐ ಬಾಲಕರ ವಸತಿ ನಿಲಯದಲ್ಲಿ ನಡೆದ ಕುಟುಂಬೋತ್ಸವ ಮತ್ತು ಲೀಡರ್ಶಿಪ್ ತರಬೇತಿ ಕಾಯ೯ಕ್ರಮದಲ್ಲಿ ಮಾತನಾಡಿದರು. ನಾಯಕತ್ವದ ಗುಣಗಳನ್ನು ನಾವೆಲ್ಲರೂ ರೂಢಿಸಬೇಕೆಂದರು. ಅಧ್ಯಕ್ಷತೆಯನ್ನು ಜೇಸಿ ಅಧ್ಯಕ್ಷರಾದ ಡಾI ಹರಿಣಾಕ್ಷಿ ಕಕೇ೯ರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪೂವ೯ ಅಧ್ಯಕ್ಷರಾದ ರಫೀಕ್ ಖಾನ್, ಜಗದೀಶ್ ಶೆಟ್ಟಿ ಕೀಳಂಜೆ ಭಾಗವಹಿಸಿದ್ದರು. ವೇದಿಕೆಯಲ್ಲಿ ಪ್ರಕಾಶ್ ದೇವಾಡಿಗ, ಸಂಧ್ಯಾ ಕುಂದರ್, ವಾಡ೯ನ್ ಜಾನ್ ಸುದಶ೯ನ ಉಪಸ್ಥಿತರಿದ್ದರು. ಈ ಸಂದಭ೯ದಲ್ಲಿ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರವನ್ನು ಉದ್ಯಮಿ ದಿನೇಶ್ ಎಂ ಪೂಜಾರಿ ಮತ್ತು ಶಿಕ್ಷಕರಾದ ಚಂದ್ರ ಬಿ ಅಮೀನ್ ರವರಿಗೆ ನೀಡಿ ಗೌರವಿಸಲಾಯಿತು. ವಲಯ ಮಟ್ಟದ ತರಬೇತಿಯಲ್ಲಿ ಭಾಗವಹಿಸಲಿರುವ ಬಾಸುಮ ಕೊಡಗು, ಉದಯ್ ನಾಯ್ಕ್ ರವರನ್ನು ಗುರುತಿಸಲಾಯಿತು.
02 May 2024, 02:13 PM
Category: Kaup
Tags: