ಕಟಪಾಡಿ : ಧರ್ಮ, ರಾಷ್ಟ್ರ ಯೋಧರ ರಕ್ಷಣೆಗಾಗಿ ಶ್ರೀ ಸಾಯಿ ಈಶ್ವರ್ ಗುರೂಜಿ 108 ದಿನ 108 ದೇವಸ್ಥಾನ ಪ್ರದಕ್ಷಿಣೆ
ಕಟಪಾಡಿ : ಶ್ರೀ ಸಾಯಿ ಮುಖ್ಯ ಪ್ರಾಣದೇವಸ್ಥಾನ ಶ್ರೀ ದ್ವಾರಕಾಮಯಿ ಮಠದ ಪೀಠಾಧೀಶರು ಮತ್ತು ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಾಯಿಈಶ್ವರ್ ಗುರೂಜಿಯವರು ಧರ್ಮ, ರಾಷ್ಟ್ರ ಯೋಧರ ರಕ್ಷಣೆಗಾಗಿ ಜೂನ್ 14 ರಿಂದ ಸಪ್ಟೆಂಬರ್ 29 ರವರೆಗೆ 108 ದಿನ 108 ದೇವಸ್ಥಾನ ಪ್ರದಕ್ಷಿಣೆ ಕೈಗೊಂಡಿದ್ದಾರೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಜೂನ್ 14 ರಂದು ಬೆಳಿಗ್ಗೆ 9 ಕ್ಕೆ ಈ ಮಹಾ ಸಂಕಲ್ಪಕ್ಕೆ ಚಾಲನೆ ಕೊಟ್ಟು ಧರ್ಮ, ರಾಷ್ಟ್ರ, ಯೋಧರ ರಕ್ಷಣೆಯ ಬಗ್ಗೆ ನಿತ್ಯ ಪ್ರಾರ್ಥನೆಗಾಗಿ ಮನವಿ ನೀಡಲಿದ್ದಾರೆ.
ಕ್ಷೇತ್ರ ದರ್ಶನದ ನೆನಪಿಗಾಗಿ ಬಿಲ್ವಪತ್ರೆಯ ಗಿಡವನ್ನು ದೇವಸ್ಥಾನದ ವಠಾರದಲ್ಲಿ ನೆಡಲಿದ್ದಾರೆ. ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಡೆಯುವ ಎಲ್ಲಾ ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳು ಎಂದಿನಂತೆ ಮುಂದುವರಿಯುತ್ತದೆ. ಗುರುಗಳ ಸಾರ್ವಜನಿಕ ಭೇಟಿ ಸಾಂತ್ವನ ಕಾರ್ಯಕ್ರಮಗಳ ಬಗ್ಗೆ ಕಚೇರಿಯನ್ನು ಸಂಪರ್ಕಿಸಬಹುದು.
ಗುರುಗಳು ಭೇಟಿ ನೀಡುವ ಕ್ಷೇತ್ರಗಳ ಬಗ್ಗೆ ಮಾಹಿತಿಯನ್ನು ಮೊದಲು ತಿಳಿಸಲಾಗುವುದು ಧರ್ಮ, ರಾಷ್ಟ್ರಕ್ಕಾಗಿ ಭಕ್ತರು ಗುರುಗಳ ಜೊತೆ ಸೇರಿ ಪ್ರಾರ್ಥನೆಯಲ್ಲಿ ಭಾಗವಹಿಸಬಹುದು ಎಂದು ಮಠದ ಪ್ರಕಟಣೆ ತಿಳಿಸಿದೆ.
