ಉಡುಪಿ : ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಕುರಿತು ಇಲಾಖಾಧಿಕಾರಿಗಳ ಸಭೆ
Thumbnail
ಉಡುಪಿ : ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಸಂಬಂಧಿಸಿದಂತೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ದಾರಿ ದೀಪಗಳ ಸಮರ್ಪಕ ನಿರ್ವಹಣೆ ಮಾಡಬೇಕು ಮತ್ತು ಪಡುಬಿದ್ರಿ, ಕಟಪಾಡಿ ಭಾಗದಲ್ಲಿ ದಿನೇ ದಿನೇ ಅಪಘಾತಗಳು ಹೆಚ್ಚುತ್ತಿದ್ದು ಅಪಘಾತ ತಡೆಗೆ ಬ್ಯಾರಿಕೇಡ್ ಹಾಗೂ ರಿಫ್ಲೆಕ್ಟರ್ ಗಳನ್ನು ಅಳವಡಿಸುವಂತೆ ಮತ್ತು ಹೆಜಮಾಡಿಯ ಕನ್ನಂಗಾರ್ ಸುಜ್ಲಾನ್ ಗೇಟ್ ಬಳಿ ಸರ್ವಿಸ್ ರಸ್ತೆ ನಿರ್ಮಿಸುವಂತೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಮತ್ತು ರಾಷ್ಟ್ರೀಯ ಹೆದ್ದಾರಿಯ ಚರಂಡಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಹಾಗೂ ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಗ್ಯಾಸ್ ಪೈಪ್ ಲೈನ್ ಗುಂಡಿಗಳನ್ನು ತೆಗೆದಿದ್ದು ಮಳೆಗಾಲ ಸಮಯದಲ್ಲಿ ಇದರಲ್ಲಿ ನೀರು ತುಂಬಿ ಅಪಘಾತ ಸಂಭವಿಸುತ್ತದೆ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಈ ಸಂದರ್ಭ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಸಹಾಯಕ ಆಯುಕ್ತರಾದ ರಶ್ಮಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ. ಅರುಣ್ ಕುಮಾರ್, ರಾಷ್ಟ್ರೀಯ ಹೆದ್ದಾರಿ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.
12 Jun 2024, 06:12 PM
Category: Kaup
Tags: