ಕಾಪು : ಈ ದಿನ ಮಾನ್ಯ ತಹಶಿಲ್ದಾರ್ ಪ್ರತಿಭಾ ಆರ್ ರವರ ನೇತೃತ್ವದಲ್ಲಿ
ಕಾಪು : ತಾಲ್ಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ತಹಶಿಲ್ದಾರ್ ಪ್ರತಿಭಾ ಆರ್ ರವರ ನೇತೃತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭ ಮಾತನಾಡಿದ ತಹಶಿಲ್ದಾರ್ ಪ್ರತಿಭಾ ಆರ್, ಯೋಗದಿಂದ ದೈಹಿಕ ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯ ಉತ್ತಮಗೊಳ್ಳುತ್ತದೆ. ಆದ್ದರಿಂದ ಎಲ್ಲರೂ ಯೋಗ ಅನ್ನು ದಿನ ನಿತ್ಯದ ಚಟುವಟಿಕೆಯ ಭಾಗವಾಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಯೋಗ ಗುರುಗಳಾದ ರವಿ ಬಂಗೇರ ಮತ್ತು ಶೈಲಜಾ ಇವರು ಯೋಗ ಕಾರ್ಯಕ್ರಮ ನಡೆಸಿಕೊಟ್ಟರು.
ತಾಲ್ಲೂಕು ಆಡಳಿತದ ಸಿಬ್ಬಂದಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
