ಕನ್ನಡ ಜಾನಪದ ಪರಿಷತ್ ಉಡುಪಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ
Thumbnail
ಉಡುಪಿ : ಕನ್ನಡ ಜಾನಪದ ಪರಿಷತ್ ಬೆಂಗಳೂರು, ಉಡುಪಿ ಜಿಲ್ಲಾ ಘಟಕ ಇವರ ಉಡುಪಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ಜೂ. 23 ರಂದು ಶಾಂತಿ ನಗರ ಮಣಿಪಾಲ ಸಾರ್ವಜನಿಕ ಗಣೇಶ ಸಮಿತಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಜಾನಪದ ಪರಿಷತ್ ಬೆಂಗಳೂರು ಇದರ ರಾಜ್ಯ ಅಧ್ಯಕ್ಷ ಡಾ. ಎಸ್ ಬಾಲಾಜಿ ಜನಪದ ಸಾಹಿತ್ಯವು ಧರ್ಮತೀತವಾಗಿದೆ. ಜಾನಪದದಿಂದ ಹಲವಾರು ಸಂಸ್ಕೃತಿಯ ಪರಿಚಯ ನಮಗೆ ದೊರೆಯುತ್ತದೆ. ಈ ನಿಟ್ಟಿನಲ್ಲಿ ಜನಪದ ಸಾಹಿತ್ಯ ಮತ್ತು ಅದರ ದಾಖಲೀಕರಣ ಅಗತ್ಯವಾಗಿದೆ. ಜಾನಪದ ಪರಿಷತ್ ಮೂಲಕ ಮುಂದಿನ ದಿನಗಳಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾನಪದ ಪರಿಷತ್ ಜಿಲ್ಲಾ ಅಧ್ಯಕ್ಷ ಡಾ. ಗಣೇಶ್ ಗಂಗೊಳ್ಳಿ ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಮೂಡುಸಗ್ರಿಯ ಧರ್ಮದರ್ಶಿ ಭಾಸ್ಕರ್ ಗುಂಡಿಬೈಲು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಉಪೇಂದ್ರ ನಾಯಕ್, ಮಹಿಳಾ ಪ್ರತಿನಿಧಿ ಅಹಲ್ಯ ಹೆಗ್ಡೆ, ಮಹಾಮಾಯಿ ಭಜನಾ ಮಂಡಳಿಯ ಸಂಸ್ಥಾಪಕಿ ಮೋಹಿನಿ ಭಟ್, ಆಶ್ಲೇಷ ಹೋಟೆಲಿನ ಮಾಲಕರಾದ ಶ್ರುತಿ ಜಿ.ಶಣೈ, ಜಿಲ್ಲಾ ಘಟಕದ ಖಜಾಂಚಿ ಚಂದ್ರ ಹಂಗಾರುಕಟ್ಟೆ ಮುಂತಾದವರು ಉಪಸ್ಥಿತರಿದ್ದರು. ಈ ಸಂದಭ೯ದಲ್ಲಿ ಹಿರಿಯ ಜಾನಪದ ಕಲಾವಿದೆ ಸರಸ್ವತಿ ಪಿತ್ರೋಡಿಯವರನ್ನು ಸನ್ಮಾನಿಸಲಾಯಿತು. ಸಂಸ್ಥೆ ವತಿಯಿಂದ ರಾಜಾಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರನ್ನು ಗೌರವಿಸಲಾಯಿತು. ನೂತನ ಅಧ್ಯಕ್ಷೆ ಮಾಯಾ ಕಾಮತ್ ಮತ್ತು ಅವರ ತಂಡಕ್ಕೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಜಿಲ್ಲಾ ಸಂ.ಕಾಯ೯ದಶಿ೯ ರಾಘವೇಂದ್ರ ಪ್ರಭು, ಕವಾ೯ಲು ನಿರೂಪಿಸಿದರು. ಪ್ರ.ಕಾಯ೯ದಶಿ೯ ಕುಸುಮ ಕಾಮತ್ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಭಜನಾ ಮತ್ತು ಸಾಂಸ್ಕ್ರತಿಕ ಕಾಯ೯ಕ್ರಮ ನಡೆಯಿತು.
24 Jun 2024, 07:28 PM
Category: Kaup
Tags: