ಕಾಪು ತಾಲೂಕಿನಲ್ಲಿ ಮಳೆಯಿಂದಾಗಿ ಮನೆಗಳಿಗೆ ಹಾನಿ
Thumbnail
ಕಾಪು : ಕರಾವಳಿಯಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು ಕಾಪು ತಾಲೂಕಿನ ಕೆಲವೆಡೆ ಮನೆಗಳಿಗೆ ಹಾನಿಯಾಗಿದೆ. ಮಳೆಯಿಂದಾಗಿ ಕಾಪು ತಾಲೂಕಿನ ತೆಂಕಗ್ರಾಮದ ಭಾಸ್ಕರ್ ಅವರ ವಾಸ್ತವ್ಯದ ಮನೆಗೆ ಹಾನಿ ಸಂಭವಿಸಿದೆ. ಶಿರ್ವದ ಲಕ್ಷ್ಮಣ ಆಚಾರಿಯವರ ಮನೆಗೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ನಂದಿಕೂರು ಗ್ರಾಮದ ಸಂತೋಷ್ ಪೂಜಾರಿಯವರ ಮನೆಗೂ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
27 Jun 2024, 04:17 PM
Category: Kaup
Tags: