ಕಟಪಾಡಿ - ಏಣಗುಡ್ಡೆ : ಎಂಟು ಮನೆಗಳು ಜಲಾವೃತ ; ತಹಶಿಲ್ದಾರ್ ಭೇಟಿ
ಕಟಪಾಡಿ : ಇಲ್ಲಿನ ಏಣಗುಡ್ಡೆ ಗ್ರಾಮದಲ್ಲಿ ಜಲಾವೃತಗೊಂಡ ಎಂಟು ಮನೆಗಳಿಗೆ ಕಾಪು ತಹಶಿಲ್ದಾರ್ ಡಾ.ಪ್ರತಿಭಾ ಆರ್ ಭೇಟಿ ನೀಡಿ, ಸಾಂತ್ವನ ಹೇಳಿದರು.
ನಾಗಿ ಮುಕ್ಕಾರ್ತಿಯವರ ಮನೆ ಪೂರ್ಣ ಜಲಾವೃತವಾಗಿದೆ.
ಈ ಸಂದರ್ಭ ರೆವಿನ್ಯೂ ಇನ್ಸ್ಪೆಕ್ಟರ್ ಇಜ್ಜಾರ್ ಸಾಬಿರ್, ಗ್ರಾಮ ಆಡಳಿತಾಧಿಕಾರಿ ಡೇನಿಯಲ್, ಗೃಹರಕ್ಷಕ ದಳದ ಸಿಬ್ಬಂದಿ ಕುಮಾರ್ ಉಪಸ್ಥಿತರಿದ್ದರು.
