ಕಾಪು : ಕಟಪಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಡೆಂಗ್ಯೂ ಜಾಗೃತಿ
ಕಾಪು : ತಾಲೂಕಿನ ಕಟಪಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಡೆಂಗ್ಯೂ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭ ಲಾರ್ವಾ ಉತ್ಪತ್ತಿಯಾಗಿದೆಯೇ ಎಂದು ತಹಶಿಲ್ದಾರ್ ನೇತೃತ್ವದಲ್ಲಿ ಅಂಗಡಿ ಮುಂಗಟ್ಟುಗಳ ಮುಂದೆ ಪರಿಶೀಲಿಸಿ ಜಾಗೃತಿ ಉಂಟು ಮಾಡಲಾಯಿತು.
ಸೊಳ್ಳೆ ಕಚ್ಚದ ಹಾಗೆ ನೋಡಿಕೊಳ್ಳಬೇಕು.
ಯಾವುದೇ ಜ್ವರಕ್ಕೆ ಸ್ವಯಂ ಚಿಕಿತ್ಸೆ ಮಾಡಿಕೊಳ್ಳಬಾರದು. ಡಾಕ್ಟರ್ ರವರ ಸಲಹೆ ಪಡೆಯಬೇಕು. ಸಾರ್ವಜನಿಕರು ತೆರೆದ ಪರಿಕರಗಳಲ್ಲಿ ನೀರು ಸಂಗ್ರಹ ಮಾಡುವುದರಿಂದ ಸೊಳ್ಳೆಗಳ ಸಂತಾನೋತ್ಪತ್ತಿ ತಾಣವಾಗುತ್ತದೆ. ಅದನ್ನು ನಿಯಂತ್ರಿಸಬೇಕು. ಸ್ವಚ್ಚತೆ ಕಾಪಾಡಬೇಕು ಎಂದು ಕಾಪು ತಾಲೂಕು ತಹಶಿಲ್ದಾರ್ ಡಾ.ಪ್ರತಿಭಾ ಆರ್. ಕರೆ ನೀಡಿದರು.
ಲಯನ್ಸ್ ಕ್ಲಬ್ ಕೊಡುಗೆ ನೀಡಿದ ಜಾಗೃತಿ ಕರಪತ್ರಗಳನ್ನು ಹಂಚಲಾಯಿತು.
ಸೀನಿಯರ್ ಹೆಲ್ತ್ ಆಫೀಸರ್ ಬಸವರಾಜ್, ಮೆಡಿಕಲ್ ಆಫೀಸರ್ ಶೈನಿ, ಪಂಚಾಯತಿ ಅದ್ಯಕ್ಷರು, ಸದಸ್ಯರು ಭಾಗವಹಿಸಿದ್ದರು.
