ಆಗಸ್ಟ್ 4 : ಪಡುಬಿದ್ರಿಯ ಸಾಯಿ ಆರ್ಕೆಡ್ ನಲ್ಲಿ ಆಟಿಯ ಕಷಾಯ ಮತ್ತು ಮೆಂತೆ ಗಂಜಿ ವಿತರಣೆ ; 10 ವರ್ಷಗಳ ಸ್ತುತ್ಯರ್ಹ ಸೇವೆ
Thumbnail
ಪಡುಬಿದ್ರಿ : ಸಾಯಿ ಆರ್ಕೆಡ್ ಪಡುಬಿದ್ರಿ ಇದರ ಆಶ್ರಯದಲ್ಲಿ ಆಗಸ್ಟ್ 4, ಆದಿತ್ಯವಾರ ಆಟಿ ಅಮಾವಾಸ್ಯೆಯಂದು ಪಡುಬಿದ್ರಿಯ ಮಾರ್ಕೆಟ್ ರಸ್ತೆಯಲ್ಲಿಯರುವ ಸಾಯಿ ಆರ್ಕೆಡ್ ನಲ್ಲಿ ಪೂರ್ವಾಹ್ನ 6 ಗಂಟೆಯಿಂದ 9 ಗಂಟೆಯವರೆಗೆ ತುಳು ಜಾನಪದ ವಿದ್ವಾಂಸರು, ಪ್ರಗತಿಪರ ಕೃಷಿಕರಾದ ಪಿ.ಕೆ ಸದಾನಂದ ಪಡುಬಿದ್ರಿಯವರ ನೇತೃತ್ವದಲ್ಲಿ ಆಟಿಯ ಕಷಾಯ ಮತ್ತು ಮೆಂತೆ ಗಂಜಿ ವಿತರಣೆ ನಡೆಯಲಿದೆ. ಕಳೆದ 10 ವರ್ಷಗಳಿಂದ ಆಟಿ ಅಮಾವಾಸ್ಯೆಯ ದಿನದಂದು ಕಷಾಯ ಹಾಗೂ ಮೆಂತೆ ಗಂಜಿಯನ್ನು ಸಾರ್ವಜನಿಕರಿಗೆ ಯಾವ ಫಲಾಪೇಕ್ಷೆ ಇಲ್ಲದೆ ನಿರಂತರವಾಗಿ ವಿತರಿಸುತ್ತಿರುವ ಇವರ ಕಾರ್ಯ ಸ್ತುತ್ಯರ್ಹವಾಗಿದೆ.
02 Aug 2024, 08:55 PM
Category: Kaup
Tags: