ಪಲಿಮಾರು : ಹೊೖಗೆ ಫ್ರೆಂಡ್ಸ್ ವತಿಯಿಂದ ಆಟಿ ಅಮಾವಾಸ್ಯೆಯ ಔಷಧೀಯ ಕಷಾಯ ವಿತರಣೆ
Thumbnail
ಪಲಿಮಾರು : ಹೊೖಗೆ ಫ್ರೆಂಡ್ಸ್ ಹೊೖಗೆ (ರಿ.) ಪಲಿಮಾರು ಸಂಸ್ಥೆಯ ವತಿಯಿಂದ ಸತತ ಐದನೇ ವರುಷದ ಆಟಿ ಅಮಾವಾಸ್ಯೆಯ ಔಷಧೀಯ ಕಷಾಯ ವಿತರಿಸಲಾಯಿತು. ಪಲಿಮಾರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಡುಪ, ಶರತ್ ಉಡುಪ, ಹೊೖಗೆ ಫ್ರೆಂಡ್ಸ್ ಸಂಸ್ಥೆಯ ಅಧ್ಯಕ್ಷರಾದ ರಿತೇಶ್ ದೇವಾಡಿಗ, ಉಪಾಧ್ಯಕ್ಷ ಸಂತೋಷ್ ದೇವಾಡಿಗ, ಕಾರ್ಯದರ್ಶಿ ಸತೀಶ ಕುಮಾರ್, ರಾಘವೇಂದ್ರ ಸುವರ್ಣ, ಜ್ಞಾನೇಶ್ , ಲಕ್ಷ್ಮಣ್ ಕೋಟ್ಯಾನ್, ಅರುಣ್ ಪೂಜಾರಿ, ರೋಷನ್, ಶ್ರೀನಿತ್, ಶ್ರೀಜಿತ್, ಅಂಕಿತ್, ಸಂಪತ್ ಉಪಸ್ಥಿತರಿದ್ದರು.
04 Aug 2024, 05:15 PM
Category: Kaup
Tags: