ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆಯಿಂದ ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ಹಿಂಸಾಚಾರ ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ
Thumbnail
ಉಡುಪಿ : ಬಾಂಗ್ಲಾದೇಶದಲ್ಲಿ ಕೆಲವು ದಿನಗಳಿಂದ ಹಿಂದೂ ಶ್ರದ್ಧಾ ಕೇಂದ್ರಗಳ ಧ್ವಂಸ, ಹಿಂದೂಗಳ ಮೇಲೆ ನಡೆಯುತ್ರಿರುವ ಹಿಂಸಾಚಾರ, ಕೊಲೆ ಹಾಗೂ ಮಹಿಳೆಯರ ಅತ್ಯಾಚಾರ ದೌರ್ಜನ್ಯಗಳ ವಿರುದ್ಧ ತಕ್ಷಣ ಮಧ್ಯ ಪ್ರವೇಶ ಮಾಡುವಂತೆ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆಯು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಉಡುಪಿ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು. ಬಾಂಗ್ಲಾದೇಶದಲ್ಲಿ ಕೆಲವು ದಿನಗಳಿಂದ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಿರಂತರವಾಗಿ ಆಗುತ್ತಿರುವ ದೌರ್ಜನ್ಯ ಮತ್ತು ಅತ್ಯಾಚಾರ ಮಾತ್ರವಲ್ಲದೆ ಹಿಂದೂ ದೇವಾಲಯಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರವು ಆದಷ್ಟು ಬೇಗ ಮಧ್ಯಪ್ರವೇಶಿಸಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಹಾಗೆಯೇ ಪೌರತ್ವ ಕಾಯ್ದೆಯಲ್ಲಿ ಮಾಡಿದ ತಿದ್ದುಪಡಿಯಂತೆ ಅಲ್ಪ ಸಂಖ್ಯಾತ ಹಾಗೂ ಅಸಹಾಯಕ ಬಾಂಗ್ಲಾದೇಶದ ಹಿಂದೂಗಳನ್ನು ಆದಷ್ಟು ಶೀಘ್ರವಾಗಿ ಭಾರತಕ್ಕೆ ಕರೆತಂದು ಅವರಿಗೆ ಪುನರ್ವಸತಿಯನ್ನು ಕಲ್ಪಿಸಿ, ಈ ದೇಶದ ಪೌರತ್ವವನ್ನು ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು. ಇದಕ್ಕೆ ಸಂಬಂಧಿಸಿದಂತೆ ಭಾರತ ದೇಶಕ್ಕೆ ನಿರಂತರ ಅಕ್ರಮವಾಗಿ ನುಸುಳುತ್ತಿರುವ ರೋಹಿಂಗ್ಯ ಮುಸ್ಲಿಮರು ಪ್ರಸಕ್ತ ಈಗಿನ ಪರಿಸ್ಥಿತಿಯಲ್ಲಿ ಭಾರತಕ್ಕೆ ಬಹಳ ಅಪಾಯಕಾರಿಯಾಗಬಹುದು. ವಿಶ್ವದಲ್ಲಿ ಭಾರತವು ಒಂದೇ ಹಿಂದೂ ರಾಷ್ಟ್ರವಾಗಿದ್ದು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಯೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತು ಮತಾಂಧ ಅನ್ಯಧರ್ಮೀಯರ ಅಟ್ಟಹಾಸಕ್ಕೆ ನಮ್ಮ ನಿರ್ದೋಷಿ ತಾಯಂದಿರು, ಅಕ್ಕ, ತಂಗಿಯರು ಹಿಂದೂ ಸಮಾಜ ಬಾಂಧವರು ಬಲಿಯಾಗದಂತೆ ತಡೆಯುವ ಜವಾಬ್ದಾರಿಯು ಬಹುಸಂಖ್ಯಾತ ಹಿಂದೂಗಳು ಮತದಾನ ಮಾಡಿ ಚುನಾಯಿಸಿದಂತಹ ನಮ್ಮ ಕೇಂದ್ರ ಸರಕಾರದ ಪ್ರಥಮ ಆದ್ಯತೆ ಆಗಿರಬೇಕು. ಉಡುಪಿ ಜಿಲ್ಲೆಯ ಪ್ರತಿಯೊಬ್ಬ ಹಿಂದೂ ನಾಗರಿಕರಿಗೂ ಭಾರತ ದೇಶದ ಗೌರವಾನ್ವಿತ ಪ್ರಧಾನಮಂತ್ರಿಯವರ ಮೇಲೆ ಸಂಪೂರ್ಣ ವಿಶ್ವಾಸವಿದ್ದು ಕಾಲ ವಿಳಂಬ ಮಾಡದೆ ಬಾಂಗ್ಲಾದೇಶದಲಿ ಇನ್ನಷ್ಟು ಹಿಂದೂಗಳ ಸಾವು ನೋವುಗಳಿಗೆ, ನಮ್ಮ ಶ್ರದ್ಧೆಯ ಮಾತಾ ಭಗಿನಿಯರ ಅತ್ಯಾಚಾರಕ್ಕೆ ಕಾರಣವಾಗದೆ ಅಗತ್ಯವೆನಿಸಿದರೆ ಮಿಲಿಟರಿ ಕಾರ್ಯಾಚರಣೆಯ ಮೂಲಕವಾದರೂ ಅಸಹಾಯಕ ಹಿಂದೂಗಳನ್ನು ರಕ್ಷಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ಸಂದರ್ಭ ಸಂಘಟನೆಯ ಪ್ರಮುಖರಾದ ಜಿತೇಶ್, ಕುಮಾರಸ್ವಾಮಿ, ಸುಧೀರ್ ಪೂಜಾರಿ, ಶ್ರೀಧರ್, ರವೀಂದ್ರ ಕಾಮತ್, ಮೋಹನ್ ಭಟ್, ಚಿತ್ತನ್ ಮೂಳೂರು, ರಾಜಗೋಪಾಲ್, ಸಂದೀಪ್ ಮತ್ತಿತರರು ಉಪಸ್ಥಿತರಿದ್ದರು.
09 Aug 2024, 04:07 PM
Category: Kaup
Tags: