ಕಾಪು : ದಂಡತೀರ್ಥ ಕನ್ನಡ ಮಾಧ್ಯಮ ಶಾಲೆ - ಸಮವಸ್ತ್ರ ವಿತರಣೆ
ಕಾಪು : ಇಲ್ಲಿನ ದಂಡತೀರ್ಥ ವಿದ್ಯಾಸಂಸ್ಥೆಯ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಉಳಿಯಾರಗೋಳಿ ಹಾಲು ಉತ್ಪಾದಕರ ಸಂಘದ ಸಹಕಾರದಲ್ಲಿ ಸಮವಸ್ತ್ರ ವಿತರಿಸಲಾಯಿತು.
ಕೆ. ಎಂ. ಎಫ್ ರಾಜ್ಯ ಸಂಘದ ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ ಸಮವಸ್ತ್ರ ವಿತರಿಸಿ ಮಾತನಾಡಿ, ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಂತೆ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೂ ಎಲ್ಲಾ ಸೌಲಭ್ಯಗಳು ದೊರಕಬೇಕು. ಸಂಘ ಸಂಸ್ಥೆಗಳು ಇಂತಹ ಮಾನವೀಯ ಕಳಕಳಿಯ ಸಹಕಾರವನ್ನು ನೀಡಿದಾಗ ಬಡ ಮಕ್ಕಳ ಕಲಿಕೆಗೆ ಪ್ರೇರಣೆ ದೊರಕಿದಂತಾಗುತ್ತದೆ ಎಂಬ ಸಂದೇಶವನ್ನು ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ.ಕೆ. ಪ್ರಶಾಂತ್ ಶೆಟ್ಟಿಯವರು ವಹಿಸಿದ್ದರು.
ಸಮಾರಂಭದಲ್ಲಿ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷರಾದ ಐತ್ತಪ್ಪ ಎಸ್. ಕೋಟ್ಯಾನ್, ಪ್ರಾಂಶುಪಾಲರಾದ ನೀಲಾನಂದ ನಾಯ್ಕ್, ಶಿಕ್ಷಣ ಸಂಯೋಜಕ ಶಿವಣ್ಣ ಬಾಯಾರ್, ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯಸ್ಥ ಗೇಬ್ರಿಯಲ್ ಫ್ರೇಂಕಿ ಮಸ್ಕರೇನ್ಹಸ್, ಎಸ್. ಡಿ. ಎಂ. ಸಿ. ಅಧ್ಯಕ್ಷೆ ಸುಮಲತಾ, ರಾಘು ಕೋಟ್ಯಾನ್ ಉಪಸ್ಥಿತರಿದ್ದರು.
