ಮಹಾಯೋಗಿ ಚಾಪಮ್ಮ ದೇವಿಯ ಕೈಯಲ್ಲಿ ಬಿಡುಗಡೆಯಾಗಲಿದೆ ಕರಾವಳಿಯ ಆದ್ಯಾತ್ಮ App
Thumbnail
ಉಡುಪಿ: ಶಂಕರಪುರದ ದ್ವಾರಕಾಮಾಯಿ ಶ್ರೀ ಸಾಯಿಬಾಬಾ ಮಂದಿರ ಧರ್ಮದರ್ಶಿ ಗುರೂಜೀ ಸಾಯಿ ಈಶ್ವರ್ ಇವರು ಆಧ್ಯಾತ್ಮಿಕ ಸಾಧಕರಿಗಾಗಿ ಮಾಡಿದ ಕರಾವಳಿಯ ಪ್ರಥಮ ಆಧ್ಯಾತ್ಮಿಕ Android Mobile App ಅನ್ನು ಮಹಾಯೋಗಿ ಶ್ರೀ ಶ್ರೀ ಚಾಪ್ಪಮ್ಮ ದೇವಿಯವರ ದಿವ್ಯ ಹಸ್ತದಿಂದ ಲೋಕಾರ್ಪಣೆಗೊಳ್ಳಲಿದೆ. ಸೆಪ್ಟಂಬರ್ 16 ರಂದು ರಾಯಚೂರಿನ ಸಿಂಧನೂರಿನ ಕಲ್ಮಂಗಿಯಲ್ಲಿರುವ "ಅಮ್ಮನವರ ಕುಟೀರ" ಇಲ್ಲಿ ನಡೆಯುವ ಸರಳ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಶಂಕರಪುರದ ದ್ವಾರಕಾಮಾಯಿ ಶ್ರೀ ಸಾಯಿಬಾಬಾ ಮಂದಿರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಗುರೂಜಿ ಸಾಯಿಈಶ್ವರ್ ಸದಾ ಅಸಹಾಯಕರ ಪರವಾಗಿ ಶ್ರಮಿಸುವವರು ಶ್ರೀ ಸಾಯಿ ಬಾಬಾರ ಪರಮಭಕ್ತರು, ಆರಾಧಕರು. ನೊಂದವರಿಗೆ ಸಾಂತ್ವಾನ ನುಡಿಯುವವರು. ಹಸಿದವರಿಗೆ ತುತ್ತು ಅನ್ನ ನೀಡಿದವರು. ಜಿಜ್ಞಾಸುಗಳಿಗೆ ಆಧ್ಯಾತ್ಮದ ಬೆಳಕು ಚೆಲ್ಲಿದವರು. ಆಧ್ಯಾತ್ಮ ವಲಯದಲ್ಲಿ ಇವರು ಮಾದರಿ ಆಧ್ಯಾತ್ಮ ಪರಿಚಾರಕರು. ಈಗಾಗಲೇ ಲಾಕ್ ಡೌನ್ ಸಮಯದಲ್ಲಿ ಆನ್ಲೈನ್ ಮೂಲಕ ಮಕ್ಕಳಿಗೆ "ನನ್ನ ಮನೆ ನನ್ನ ಗುರುಕುಲ" ಎಂಬ ಕಾರ್ಯಕ್ರಮ ಮಾಡಿ ಯಶಸ್ವಿಯಾಗಿರುವಂತೆ ನಂತರ ಆನ್ಲೈನ್ ಮೂಲಕ "ಆತ್ಮ ಶುದ್ಧಿ ಕ್ರಿಯಾ ಧ್ಯಾನ" ಮಾಡಿದ್ದು ಇದರಲ್ಲಿ ಐದುನೂರಕ್ಕೂ ಹೆಚ್ಚು ಜನರು ಭಾಗವಹಿಸಿರುವರು, ನಂತರ "ಪಾಕೆಟ್ ಪೆಂಡುಲಂ" ತರಬೇತಿ ಶಿಬಿರವನ್ನು ಆನ್ಲೈನ್ ಮೂಲಕ ಎರಡು ಅವದಿಯಲ್ಲಿ ಮಾಡಿದ್ದು ಎಲ್ಲವೂ ಯಶಸ್ವಿಯಾಗಿರುತ್ತದೆ ಇದೀಗ ಲೋಕಾರ್ಪಣೆ ಮಾಡಲಾಗುವ Android App ನಲ್ಲಿ ಆನ್ಲೈನ್ ತರಗತಿಗಳನ್ನು ನಡೆಸಲು ಬೇಕಾಗುವ ವ್ಯವಸ್ಥೆಯೂ ಇರುತ್ತದೆ. ಈ ಆಫ್ ಮೂಲಕ ಭೌತಿಕ, ಐಶ್ವರ್ಯ, ಆರೋಗ್ಯ, ಶಾಂತಿ, ಧ್ಯಾನ, ಯೋಗ, ಸಾಂತ್ವನ ಮತ್ತು ಆಧ್ಯಾತ್ಮಿಕ ಮಾಹಿತಿಗಳ ಕಣಜವೇ ಆಧ್ಯಾತ್ಮಿಕ ಸಾಧಕರಿಗೆ ಸಿಗಲಿದೆ
14 Sep 2020, 11:10 AM
Category: Kaup
Tags: