ಉಡುಪಿ : ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ತರಬೇತಿಗೆ ಮಹತ್ವವಿದೆ - ಡಾ. ಗಾಯತ್ರಿ ಎನ್
ಉಡುಪಿ : ಮಾನವ ಸಂಪನ್ಮೂಲದ ಅಭಿವೃದ್ಧಿಯಲ್ಲಿ ತರಬೇತಿ ಪ್ರಧಾನ ಪಾತ್ರ ವಹಿಸುತ್ತದೆ. ಪರಿಣಾಮಕಾರಿ ತರಬೇತಿಯು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಬಹು ಮುಖ್ಯವಾದುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್ ಅವರು ಹೇಳಿದರು. ಅವರು ಮಂಗಳೂರು ವಿಶ್ವವಿದ್ಯಾನಿಲಯ ರೆಡ್ ಕ್ರಾಸ್ ಘಟಕ ಮತ್ತು ಉಡುಪಿ ಜಿಲ್ಲಾ ರೆಡ್ ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರೆಡ್ಕ್ರಾಸ್ ನಾಯಕರಿಗೆ ನಡೆದ ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾನಾಡುತ್ತಿದ್ದರು.
ರೆಡ್ಕ್ರಾಸ್ ರಾಜ್ಯ ಶಾಖೆಯ ಆಡಳಿತ ಮಂಡಳಿ ಸದಸ್ಯರಾದ ವಿ.ಜಿ. ಶೆಟ್ಟಿಯವರು ಸಮಾರಂಭವನ್ನು ಉದ್ಘಾಟಿಸಿ ಮಾತಾನಾಡಿ, ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣವನ್ನು ಪದವಿ ಶಿಕ್ಷಣದಿಂದಲೇ ರೂಢಿಸಿಕೊಳ್ಳುವಂತೆ ಹೇಳಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ರೆಡ್ ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಯುವ ರೆಡ್ ಕ್ರಾಸ್ ಅನುಷ್ಠಾನದಲ್ಲಿ ವಿದ್ಯಾರ್ಥಿ ನಾಯಕರ ಪಾತ್ರವನ್ನು ವಿವರಿಸಿದರು.
ರೆಡ್ ಕ್ರಾಸ್ ಸ್ವಯಂಸೇವಕಿಯರು ರೆಡ್ ಕ್ರಾಸ್ ಪ್ರಾರ್ಥನೆ ನಡೆಸಿದರು. ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ, ಪ್ರಸ್ತಾವಿಕ ಮಾತುಗಳನ್ನಾಡಿದರು. ಮಂಜುನಾಥ ಪೈ ಮೆಮೊರಿಯಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್ ಕ್ರಾಸ್ ಸಂಯೋಜಕಿ ಡಾ. ದಿವ್ಯಾ ಪ್ರಭು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ರೆಡ್ ಕ್ರಾಸ್ ಖಜಾಂಚಿ ರಮಾದೇವಿ ವಂದಿಸಿ, ರಾಘವೇಂದ್ರ ಪ್ರಭು ಕರ್ವಾಲ್ ಕಾರ್ಯಕ್ರಮ ನಿರೂಪಿಸಿದರು.
