ರಾಜ್ಯಮಟ್ಟದ ‌ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತರಾದ ಎಮ್. ನೀಲಾನಂದ ನಾಯ್ಕ್
Thumbnail
ಕಾಪು : ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರಿ.) ಕರ್ನಾಟಕ (ರುಪ್ಸ) ವತಿಯಿಂದ ಸೋಮವಾರ ಬೆಂಗಳೂರಿನಲ್ಲಿ ನಡೆದ ರುಪ್ಸ ಸಂಭ್ರಮ ಮತ್ತು ರುಪ್ಸ ಮಿತ್ರ ಸಂಚಿಕೆ ಬಿಡುಗಡೆ ಸಮಾರಂಭದಲ್ಲಿ ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಮ್. ನೀಲಾನಂದ ನಾಯ್ಕ್ ರನ್ನು ರಾಜ್ಯಮಟ್ಟದ ವಿದ್ಯಾರತ್ನ ಪ್ರಶಸ್ತಿ ನೀಡಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭ ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ, ವಿಧಾನಪರಿಷತ್ ಸದಸ್ಯರಾದ ಎಲ್ ಭೋಜೆಗೌಡ, ರುಪ್ಸ ಕರ್ನಾಟಕ ಬೆಂಗಳೂರು ಇದರ ಗೌರವ ಅಧ್ಯಕ್ಷರಾದ ಟಿ.ವಿ ಮೋಹನ್, ರಾಜ್ಯಾಧ್ಯಕ್ಷರಾದ ಡಾ. ಹಾಲನೂರು ಲೇಪಾಕ್ಷಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಿಧರ ಎಲ್ ದಿಂಡೂರ, ರಾಜ್ಯ ಕಾರ್ಯಾಧ್ಯಕ್ಷ ಕೊಟ್ರೇಶ್ ಬಿ ಎಮ್ ಮತ್ತಿತರರು ಉಪಸ್ಥಿತರಿದ್ದರು.
22 Oct 2024, 11:13 PM
Category: Kaup
Tags: