ತುಳುಕೂಟ ಪುಣೆ ರಾಷ್ಟೀಯ ತುಳು ಪ್ರಶಸ್ತಿಗೆ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಆಯ್ಕೆ
Thumbnail
ಕಾಪು : ಮಹಾರಾಷ್ಟ್ರ ತುಳುಕೂಟ ಪುಣೆ (ರಿ.) 2024 ತುಳುನಾಡ ಜಾತ್ರೆ ಬೊಳ್ಳಿ ಪರ್ಬ ಕಾರ್ಯಕ್ರಮ ನ.10, ರವಿವಾರ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನ ಸಭಾಂಗಣದಲ್ಲಿ ಹಲವಾರು ಗಣ್ಯತಿಗಣ್ಯರ ಸಮ್ಮುಖದಲ್ಲಿ ಸಮಾಜ ಸೇವೆಗಾಗಿ ಕೊಡಲ್ಪಡುವ 2024 ರ ರಾಷ್ಟ್ರೀಯ ತುಳು ಪ್ರಶಸ್ತಿಗೆ ಉಡುಪಿ ಜಿಲ್ಲೆ ಕಾಪು ತಾಲೂಕಿನ ಸಮಾಜ ಸೇವಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹತ್ತಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿ ಸೇರಿ ನೂರಾರು ಪ್ರಶಸ್ತಿ ಪಡೆದ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಆಯ್ಕೆಯಾಗಿದ್ದಾರೆಂದು ತುಳುಕೂಟ ಇದರ ಅಧ್ಯಕ್ಷರು ದಿನೇಶ್ ಶೆಟ್ಟಿ ಕಳತ್ತೂರು ಉಪಾಧ್ಯಕ್ಷರಾದ ಉದಯ ಶೆಟ್ಟಿ ಕಳತ್ತೂರು ಪ್ರ.ಕಾರ್ಯದರ್ಶಿ ರೋಹಿತ್ ಡಿ ಶೆಟ್ಟಿ ನಗ್ರಿಗುತ್ತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
03 Nov 2024, 03:13 PM
Category: Kaup
Tags: