ಹೆಜಮಾಡಿ ಮೀನುಗಾರಿಕಾ ಬಂದರು ಕಾಮಗಾರಿ ಪೂರ್ಣಗೊಳಿಸಲು ಕಾಪು ಶಾಸಕರಿಂದ ಮನವಿ
Thumbnail
ಕಾಪು : ತಾಲೂಕಿನ ಹೆಜಮಾಡಿ ಬಂದರಿಗೆ 2021-22 ಸಾಲಿನಲ್ಲಿ 180 ಕೋಟಿ ಮಂಜುರಾಗಿದ್ದು ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಹೆಜಮಾಡಿ ಮತ್ತು ಸುತ್ತಮುತ್ತಲಿನ ಮೀನುಗಾರರಿಗೆ ತೊಂದರೆ ಆಗುತ್ತಿದ್ದು ಮೀನುಗಾರಿಕಾ ದೋಣಿ ತಂಗುದಾಣಕ್ಕೆ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಿ ಹೆಜಮಾಡಿ ಬಂದರಿನ ಕಾಮಗಾರಿಯನ್ನು ಕೂಡಲೆ ಕೈಗೊಳ್ಳಬೇಕೆಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮೀನುಗಾರಿಕಾ ಮುಖ್ಯ ಕಾರ್ಯದರ್ಶಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಂದರ್ಭ ಮನವಿ‌ ಸ್ವೀಕರಿಸಿದ ಮೀನುಗಾರಿಕಾ ಕಾರ್ಯದರ್ಶಿ ಅಜಯ್ ನಾಗಭೂಷಣ್ ಅವರು ಕೂಡಲೇ ಕಾಮಗಾರಿಗೆಯನ್ನು ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು.
05 Nov 2024, 07:38 PM
Category: Kaup
Tags: