ಮಹಾಬಲ ಮೂಲ್ಯರ ಮೇಲಿನ ಹಲ್ಲೆ ಖಂಡಿಸಿ ಕಾರ್ಕಳ ಕುಲಾಲ ಯುವ ವೇದಿಕೆಯಿಂದ ಮನವಿ
ಕಾರ್ಕಳ : ಇಲ್ಲಿನ ಪುರಸಭಾ ಸದಸ್ಯನಿಂದ ಕೂಲಿ ಕಾರ್ಮಿಕ ಮಹಾಬಲ ಮೂಲ್ಯ ಎನ್ನುವವರಿಗೆ ಮಾಡಿದ ಹಲ್ಲೆ ಪ್ರಕರಣ ಖಂಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರ್ಕಳ ಕುಲಾಲ ಯುವ ವೇದಿಕೆ ವತಿಯಿಂದ ಸೋಮವಾರ ಕಾರ್ಕಳ ಡಿ ವೈ ಎಸ್ ಪಿ ಅರವಿಂದ ಕಲಗುಜ್ಜಿ, ನಗರ ಠಾಣಾ ಎಸ್ ಐ ಸಂದೀಪ್ ಶೆಟ್ಟಿಯವರಿಗೆ ಮನವಿ ನೀಡಲಾಯಿತು.
ಪುರಸಭಾ ಸದಸ್ಯ ಸೀತಾರಾಮರು ದೊಣ್ಣೆಯಲ್ಲಿ ಹೊಡೆದ ಹೊಡೆತಕ್ಕೆ ಮಹಾಬಲ ಮೂಲ್ಯರ ಮೊಣ ಕಾಲಿನ ಮೂಳೆ ಮುರಿತಗೊಂಡಿದೆ. ಈ ಕ್ರೂರ ಪ್ರವೃತ್ತಿಯ ಬಗ್ಗೆ ಸಾಮಾಜಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಈ ಘಟನೆಯನ್ನು ಕುಲಾಲ ಯುವ ವೇದಿಕೆ ಈ ಖಂಡಿಸಿ, ಘಟನೆ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದೆ. ತಕ್ಷಣವೇ ಆರೋಪಿಯನ್ನು ಬಂಧನ ಮಾಡದಿದ್ದರೆ ತಾಲೂಕಿನಾದ್ಯoತ ತೀವ್ರ ಹೋರಾಟ ಮಾಡುವುದಾಗಿ ಯುವ ವೇದಿಕೆ ಎಚ್ಚರಿಸಿದೆ.
ಮನವಿ ನೀಡಿದ ಸಂದರ್ಭ ಕುಲಾಲ ಯುವ ವೇದಿಕೆಯ ಜಿಲ್ಲಾಧ್ಯಕ್ಷ ದಿವಾಕರ ಬಂಗೇರ, ಕಾರ್ಕಳ ಕುಲಾಲ ಸಂಘದ ಅಧ್ಯಕ್ಷ ಹರೀಶ್ಚಂದ್ರ ಕುಲಾಲ್, ಕಾರ್ಕಳ ಕುಲಾಲ ಯುವ ವೇದಿಕೆಯ ಅಧ್ಯಕ್ಷ ಉದಯ ಕುಲಾಲ, ಹೆರ್ಮುಂಡೆ ಕುಲಾಲ ಸಂಘದ ಕಾರ್ಯದರ್ಶಿ ಹೃದಯ ಕುಲಾಲ್, ಹೆಬ್ರಿ ಕುಲಾಲ ಸಂಘದ ಅಧ್ಯಕ್ಷ ಸುರೇಂದ್ರ ಕುಲಾಲ್ ವರಂಗ, ಕಾರ್ಕಳ ಕುಲಾಲ ಯುವ ವೇದಿಕೆಯ ಕಾರ್ಯದರ್ಶಿ ಸಂದೇಶ್, ಕಾಂತಾವರ ಕುಲಾಲ ಸಂಘಟನೆಯ ಅಧ್ಯಕ್ಷ ವಿಠಲ ಮೂಲ್ಯ ಬೇಲಾಡಿ, ಸರ್ವಜ್ಞ ಆಸರೆ ಕಿರಣ ಬಳಗದ ಪ್ರಭಾಕರ್ ಇನ್ನ ಮತ್ತು ಯುವ ವೇದಿಕೆ ಸದಸ್ಯರು ಉಪಸ್ಥಿತರಿದ್ದರು.
