ಕಾಪುವಿನಲ್ಲಿ ನ. 26ರಂದು ಸಂವಿಧಾನ ಉಳಿಸಿ ಬೃಹತ್ ಜಾಥಾ ; ಸಾರ್ವಜನಿಕ ಸಭೆ
Thumbnail
ಕಾಪು : ರಕ್ಷಣಾಪುರ ಜವನೆರ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನ. 26 ರಂದು ಕಾಪು ಪೇಟೆಯಲ್ಲಿ ಸಂಜೆ 3 ಗಂಟೆಗೆ ಸಂವಿಧಾನ ಉಳಿಸಿ ಬೃಹತ್ ಜಾಥಾ ಮತ್ತು ಸಾರ್ವಜನಿಕ ಸಭೆ ಆಯೋಜಿಸಲಾಗಿದೆ ಎಂದು ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಹೇಳಿದರು. ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸರಕಾರದ ಆದೇಶದಂತೆ ಸಂವಿಧಾನ ದಿನದ ಅಂಗವಾಗಿ ಸಂವಿಧಾನದ ಬಗೆಗಿನ ಜಾಗೃತಿಗಾಗಿ ಸಂವಿಧಾನ ಉಳಿಸಿ ಬೃಹತ್ ಜಾಥಾ ಮತ್ತು ಸಾರ್ವಜನಿಕ ಸಭೆ ಆಯೋಜಿಸಲಾಗಿದೆ. ಜನರ ಹಕ್ಕುಗಳ ಜಾಗೃತಿಗಾಗಿ, ಸಂವಿಧಾನದ ಮೇಲಿನ ಅಪಸ್ವರಕ್ಕಾಗಿ, ಸಂವಿಧಾನ ಉಳಿಸುವ ಉದ್ದೇಶದಿಂದ ಜಾಥಾದ ಜೊತೆಗೆ ಸಾರ್ವಜನಿಕ ಸಭೆ ನಡೆಯಲಿದೆ. ಸಭೆಯಲ್ಲಿ ಹಿಂದು, ಮುಸ್ಲಿಂ,ಕ್ರೈಸ್ತ ಧರ್ಮದ ಗುರುಗಳು ಭಾಗವಹಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ನಿಖಿತ್ ರಾಜ್, ಸುಧೀರ್ ಮರೋಳಿ, ಜಯಪ್ರಕಾಶ್ ಹೆಗ್ಡೆ, ದಲಿತ ಸಂಘಟನೆಯ ಸುಂದರ್ ಮಾಸ್ತರ್, ಆನಂದ್ ಬ್ರಹ್ಮಾವರ ಸಹಿತ ಗಣ್ಯರು ಭಾಗವಹಿಸಲಿದ್ದಾರೆ. ಅಂದು 5 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಇದರಲ್ಲಿ ಕನಿಷ್ಠ 3 ಸಾವಿರ ಮಹಿಳೆಯರು ಭಾಗವಹಿಸಲಿದ್ದಾರೆ. ಸಂವಿಧಾನದ ಅರ್ಪಣೆಯ ದಿನದಂದು ಮೂರು ಸಾವಿರ ಹೆಣ್ಣುಮಕ್ಕಳಿಗೆ ಕೊಡುಗೆಯಾಗಿ ಸೀರೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ರಕ್ಷಣಾಪುರ ಜವನೆರ್ ಅಧ್ಯಕ್ಷ ನವೀನ್ ಎನ್‌ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಶರ್ಫುದ್ದೀನ್ ಶೇಖ್, ಶಾಂತಲತಾ ಶೆಟ್ಟಿ, ಶೇಖರ ಹೆಜಮಾಡಿ, ಉಪಸ್ಥಿತರಿದ್ದರು.
24 Nov 2024, 08:01 AM
Category: Kaup
Tags: