ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಜಾಥ ಮತ್ತು ಸಾರ್ವಜನಿಕ ಸಭೆ
Thumbnail
ಕಾಪು : ಸಂವಿಧಾನ ಅಪಾಯದಲ್ಲಿದೆ. ಹಿಂದಿನ ಮನು ಆಡಳಿತ ಕೊನೆಗೊಳಿಸಿ ಪ್ರಸ್ತುತ ನಾವು ಬದುಕುತ್ತಿರುವುದು ನಮ್ಮ ಸಂವಿಧಾನದ ಶಕ್ತಿಯಿಂದ. ಸಂವಿಧಾನದಿಂದ ಆಡಳಿತದ ಚುಕ್ಕಾಣಿ ಹಿಡಿವರೇ ಸಂವಿಧಾನ ಬದಲಾವಣೆ ಬಯಸುತ್ತಿದ್ದಾರೆ. ಕನಸನ್ನು ಕೊಟ್ಟ ಗ್ರಂಥ ಸಂವಿಧಾನ ಎಂದು ವಾಗ್ಮಿ ನಿಕೇತ್ ರಾಜ್ ಮೌರ್ಯ ಹೇಳಿದರು. ಅವರು ಕಾಪು ಪೇಟೆಯಲ್ಲಿ ರಕ್ಷಣಾಪುರ ಜವನೆರ್ ಕಾಪು ಇದರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನಡೆದ ಸಂವಿಧಾನ ಉಳಿಸಿ ಬೃಹತ್ ಜಾಥ ಮತ್ತು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡ ಸುಧೀರ್ ಮರೋಳಿ ಮಾತನಾಡಿ, ಕೆಲವರಿಗೆ ಗೌರವ ಕೊಡುವ ಸಂವಿಧಾನ ಬೇಡ ಎಲ್ಲರಿಗೂ ಗೌರವ ನೀಡುವ ಸಂವಿಧಾನ ಬೇಕಾಗಿದೆ ಎಂದರು. ಪೋಲಿಸ್ ವರಿಷ್ಠಾಧಿಕಾರಿಯ ವಿರುದ್ಧ ಉಡುಪಿಯ ಶಾಸಕರುಗಳು ಸಾಮಾನ್ಯ ಜನರ ಎದುರು ಯಾಕೆ ಪ್ರತಿಭಟಿಸುವಿರಿ ? ವಿಧಾನ ಸೌಧದಲ್ಲಿ ಪ್ರಶ್ನಿಸಿ ನಿಮಗೆ ಸಂವಿಧಾನ ಆ ಹಕ್ಕನ್ನು ನೀಡಿದೆ ಎಂದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಸಮಾನತೆ ಬೋಧಿಸಿದ ಸಂವಿಧಾನದ ಮೌಲ್ಯವನ್ನು ಮರೆತಿದ್ದೇವೆ. ಇಂದಿನ ಸಭೆ ಅದಕ್ಕೆ ಪುನರ್ ಚಾಲನೆ ದೊರೆತಂತಾಗಿದೆ. ನಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗುವ ಎಂದರು. ಸಭೆಯಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಜಯಪ್ರಕಾಶ್ ಹೆಗ್ಡೆ, ರಕ್ಷಣಾಪುರ ಜವನೆರ್ ಅಧ್ಯಕ್ಷರಾದ ನವೀನ್ ಎನ್ ಶೆಟ್ಟಿ, ಧರ್ಮಗುರುಗಳಾದ ವಿಲಿಯಂ ಮಾರ್ಟಿಸ್‌, ಶ್ರೀನಿವಾಸ ತಂತ್ರಿ ಮತ್ತು ಇರ್ಶಾದ್‌ ಸಅದಿ, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ  ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಹರ ಶೆಟ್ಟಿ, ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಸುಂದರ ಮಾಸ್ತರ್, ಆನಂದ ಬ್ರಹ್ಮಾವರ, ಪ್ರಮುಖರಾದ ಕಿಶನ್ ಹೆಗ್ಢೆ ಕೊಳ್ಕೆಬೈಲು, ನವೀನ್ ಚಂದ್ರ ಸುವರ್ಣ, ಸಂತೋಷ್ ಕುಲಾಲ್ ಪಕ್ಕಾಲು, ಶಾಂತಲತಾ ಶೆಟ್ಟಿ, ಶೇಖರ್ ಹೆಜಮಾಡಿ, ಗೀತಾ ವಾಗ್ಲೆ, ವೆರೋನಿಕಾ ಕರ್ನೆಲಿಯೋ, ಶರ್ಪುದ್ದೀನ್ ಶೇಖ್, ವಿಶ್ವಾಸ್ ಅಮೀನ್,  ಶಿವಾಜಿ ಸುವರ್ಣ, ಹರೀಶ್ ಕಿಣಿ, ರಮೇಶ್ ಕಾಂಚನ್, ಕಾಪು ದಿವಾಕರ ಶೆಟ್ಟಿ, ದಿನಕರ ಹೇರೂರು ಮೊದಲಾದವರು ಉಪಸ್ಥಿತರಿದ್ದರು.  ಸಭೆಗು ಮುನ್ನ ಕಾಪು ಜನಾರ್ಧನ ದೇಗುಲದ ಆವರಣದಿಂದ ಕಾಪು ಪೇಟೆಯವರೆಗೆ ಸಾವಿರಾರು ಜನರಿಂದ ಜಾಥವು ನಡೆಯಿತು. ಸಂವಿಧಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಶಂಕರ್ ಮಲ್ಪೆ ತಂಡ ಸಂವಿಧಾನದ ಗೀತೆ ಹಾಡಿದರು. ಸುಮಾರು ಮೂರು ಸಾವಿರ ಮಹಿಳೆಯರಿಗೆ ಕೊಡುಗೆಯಾಗಿ ಸೀರೆಯನ್ನು ನೀಡಲಾಯಿತು.
Additional image Additional image
26 Nov 2024, 10:12 PM
Category: Kaup
Tags: