ಕಾಪು ಶಾಸಕರ ಕಚೇರಿಯಲ್ಲಿ ಸಂವಿಧಾನ ದಿನ ಆಚರಣೆ
Thumbnail
ಕಾಪು : ಶಾಸಕರ ಕಚೇರಿಯಲ್ಲಿ ಮಂಗಳವಾರ ಸಂವಿಧಾನ ದಿನವನ್ನು ಆಚರಿಸಲಾಯಿತು. ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪ್ರತಿಜ್ಞಾ ವಿಧಿ ಕೈಗೊಂಡು, ಸಂವಿಧಾನಕ್ಕೆ ನಮಸ್ಕರಿಸಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಶರಣ್ ಕುಮಾರ್ ಮಟ್ಟು, ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ಕಾಪು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
26 Nov 2024, 10:21 PM
Category: Kaup
Tags: