ಶ್ರಾವ್ಯ ಆರ್. ಅಂಚನ್ "ಸರಸ್ವತಿ ಪುರಸ್ಕಾರ" ರಾಜ್ಯ ಪ್ರಶಸ್ತಿಗೆ ಆಯ್ಕೆ
Thumbnail
ಪಡುಬಿದ್ರಿಯ ರವಿರಾಜ್ ಕೋಟ್ಯಾನ್ ಮತ್ತು ಶ್ಯಾಮಲಾ ದಂಪತಿಯ ಪುತ್ರಿಯಾದ ಶ್ರಾವ್ಯ ಆರ್. ಅಂಚನ್ ಸಾಂಸ್ಕೃತಿಕ, ಕ್ರೀಡಾ, ಶೈಕ್ಷಣಿಕ ರಂಗದಲ್ಲಿ ಮುಂದಿದ್ದು, ಪಡುಬಿದ್ರಿ ಸಾಗರ್ ವಿದ್ಯಾ ಮಂದಿರ ಶಾಲೆಯ ವಿದ್ಯಾರ್ಥಿಯಾಗಿ ಕಬಡ್ಡಿ ಕ್ರೀಡೆಯಲ್ಲಿ 2 ಬಾರಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೂ ಆಯ್ಕೆಯಾದವರು. 2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 613 (98.08%)ಅಂಕ ಪಡೆದಿರುವ ಇವರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ದಾವಣಗೆರೆ-ಸಾಲಿಗ್ರಾಮ ಇವರು ನೀಡಲ್ಪಡುವ "ಸರಸ್ವತಿ ಪುರಸ್ಕಾರ" ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕನ್ನಡ ರಾಜ್ಯೋತ್ಸವದಂದು ದಾವಣಗೆರೆಯ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಆವರಣದಲ್ಲಿ ಈ ಪ್ರಶಸ್ತಿಯನ್ನು ಪಡೆಯಲಿದ್ದಾರೆ. ವರದಿ : ದೀಪಕ್ ಬೀರ ಪಡುಬಿದ್ರಿ
24 Sep 2020, 02:14 PM
Category: Kaup
Tags: