ಕಾಪು ಶ್ರೀ ಹೊಸ ಮಾರಿಗುಡಿ : ಮುಂಬೈಯ ಮೀರಾ - ಬಾಯಂದರ್ ವಲಯದಲ್ಲಿ ನವದುರ್ಗಾ ಲೇಖನ ಸಂಕಲ್ಪಕ್ಕೆ ಸಭೆ
ಮುಂಬೈ: ಮುಂಬೈಯ ಮೀರಾ - ಬಾಯಂದರ್ ವಲಯದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸಾನಿಧ್ಯ ವೃದ್ಧಿ ಮತ್ತು ಲೋಕಕಲ್ಯಾಣರ್ಥವಾಗಿ ನಡೆಯುತ್ತಿರುವ ನವದುರ್ಗಾ ಲೇಖನ ಯಜ್ಞದ ಮಾಹಿತಿ ನೀಡಲು ಡಿ.15ರಂದು ಮೀರಾ ರೋಡ್ ಪೂರ್ವದ ಹೋಟೆಲ್ ಬಾಲಾಜಿ ಇಂಟರ್ನ್ಯಾಷನಲ್ ನಲ್ಲಿ ಸಭೆ ನಡೆಯಿತು.
ಬ್ರಹ್ಮಕಲಶೋತ್ಸವದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ (ರಿ.) ಇದರ ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರಾದ ಸಾಯಿ ಪ್ಯಾಲೇಸ್ ಗ್ರೂಪ್ ಆಫ್ ಹೊಟೇಲ್ಸ್ ನ ಉದಯ ಸುಂದರ್ ಶೆಟ್ಟಿಯವರು ನೀಡಿದರು.
ಮುಂಬೈ ಸಮಿತಿಯ ಗೌರವ ಸಲಹೆಗಾರರು ಹಾಗೂ ನವದುರ್ಗಾ ಲೇಖನ ಯಜ್ಞ ಸಮಿತಿಯ ಮುಂಬೈಯ ಪ್ರಧಾನ ಸಂಚಾಲಕರಾದ ಎರ್ಮಾಳ್ ಹರೀಶ್ ಶೆಟ್ಟಿ ನವದುರ್ಗಾ ಲೇಖನ ಯಜ್ಞದ ವಿಧಿವಿಧಾನಗಳ ಬಗ್ಗೆ ತಿಳಿಸಿದರು.
ಮೀರಾ ಬಾಯಂದರ್ ವಲಯದ ಸಂಚಾಲಕರಾದ ಕಿಶೋರ್ ಕುಮಾರ್ ಶೆಟ್ಟಿ ಕುತ್ಯಾರು ಪ್ರಾಸ್ತವಿಕವಾಗಿ ಮಾತನಾಡಿದರು. ಸಹ ಸಂಚಾಲಕರಾದ ರವೀಂದ್ರ ಶೆಟ್ಟಿ ಕೊಟ್ರಪಾಡಿ ದಾನಿಗಳು ನೀಡಿರುವ ವಿಶೇಷ ಕೊಡುಗೆಗಳ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಸಂಪತ್ ಶೆಟ್ಟಿ ಪಂಜದ ಗುತ್ತು, ರವೀಂದ್ರ ಶೆಟ್ಟಿ ದೇರಳಕಟ್ಟೆ ,ಆರ್ಥಿಕ ಸಮಿತಿಯ ಸಂಚಾಲಕರಾದ ಸಂದೀಪ್ ಶೆಟ್ಟಿ ಶಿರ್ವ, ಮುಂಬಯಿ, ಬಾಲಾಜಿ ಇಂಟರ್ ನ್ಯಾಷನಲ್ ಹೋಟೆಲ್ ನ ಮಾಲಕರಾದ ಸುಂದರ್ ಶೆಟ್ಟಿ, ಬಾಬಾಪ್ರಸಾದ್ ಅರಸ ಕುತ್ಯಾರು, ಬಂಟ್ಸ್ ಸಂಘ ಮುಂಬೈ ಮೀರಾ ಬಾಯಂದರ್ ವಲಯದ ಪದಾಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
