ಇನ್ನಂಜೆ ಯುವಕ ಮಂಡಲದಿಂದ ರಾಷ್ಟ್ರೀಯ ಯುವ ದಿನಾಚರಣೆ
ಕಾಪು : ಇನ್ನಂಜೆ ಯುವಕ ಮಂಡಲ (ರಿ.) ಇನ್ನಂಜೆ ವತಿಯಿಂದ ಭಾನುವಾರ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಸಂಸ್ಥೆಯ ನೂತನ ಸಭಾಭವನದಲ್ಲಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು.
ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಹೂವನ್ನು ಅರ್ಪಿಸಿ ಗೌರಾವಾರ್ಪಣೆ ಸಲ್ಲಿಸಲಾಯಿತು.
ಈ ಸಂದರ್ಭ ಯುವಕ ಮಂಡಲದ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಮಾಜಿ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
