ಕಾಪು ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ
Thumbnail
ಕಾಪು : ತಾಲೂಕು ಆಡಳಿತ ಸೌಧದಲ್ಲಿ ರವಿವಾರ ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸುಧಾಕರ್ ಸಾಲಿಯಾನ್, ನೀಲಾನಂದ ನಾಯಕ್, ಸೂರಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ತಹಶೀಲ್ದಾರರಾದ ಪ್ರತೀಭಾ ಆರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ, ಕಾಪು ಪುರಸಭೆಯ ಮುಖ್ಯಾಧಿಕಾರಿ ನಾಗರಾಜ್, ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಗೋಪಾಲಕೃಷ್ಣ ಗಾವ್ಕಂರ್, ಕಾಪು ಪುರಸಭೆಯ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
26 Jan 2025, 07:18 PM
Category: Kaup
Tags: