ಮಾ.13 :ಪಾಂಗಾಳದಲ್ಲಿ ನಡೆಯಲಿದೆ ವೈಭವದ ಸಿರಿಜಾತ್ರೆ
Thumbnail
ಪಾಂಗಾಳ : ಮುಕ್ಕಾಲಿ ಅಣ್ಣು ಶೆಟ್ಟಿ ಕುಟುಂಬಸ್ಥರ ಆಡಳಿತದ ಶ್ರೀ ಆದಿ ಆಲಡೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ವೈಭವದ ಸಿರಿ ಜಾತ್ರೆಯು ಮಾ.13, ಗುರುವಾರದಂದು ಜರಗಲಿದೆ. ಮಾ.13, ಗುರುವಾರದಂದು ಬೆಳಗ್ಗೆ 11 ಗಂಟೆಗೆ ಧ್ವಜಾರೋಹಣದಿಂದ ಪ್ರಾರಂಭಗೊಂಡು ಮಧ್ಯಾಹ್ನ 12-30 ಕ್ಕೆ ಮಹಾಪೂಜೆ, 12-45 ಕ್ಕೆ ಬ್ರಾಹ್ಮಣ ಸುಹಾಸಿನಿ ಆರಾಧನೆ, ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ. ರಾತ್ರಿ 08:30 ಕ್ಕೆ ಭಂಡಾರ ಚಾವಡಿಯಿಂದ ಪರಿವಾರ ದೈವಗಳ ಭಂಡಾರ ಹೊರಟು ರಾತ್ರಿ 09-30 ಕ್ಕೆ ವೈಭವ್ ಬೈಗಿನ ಬಲಿ ನಡೆಯಲಿರುವುದು. ರಾತ್ರಿ 11 ಕ್ಕೆ ಕುಮಾರ ದರ್ಶನ , ರಾತ್ರಿ 1 ಕ್ಕೆ ರಂಗಪೂಜೆ, ರಾತ್ರಿ 2:30 ಕ್ಕೆ ಬ್ರಹ್ಮಮಂಡಲ, ರಾತ್ರಿ 3:30 ಕ್ಕೆ ಭೂತಬಲಿ, ರಾತ್ರಿ 4:30 ರಿಂದ ತುಲಾಭಾರ ಸೇವೆಗಳು ನಡೆಯಲಿದೆ. ಮಾ.14, ಶುಕ್ರವಾರ ಬೆಳಿಗ್ಗೆ 11ಕ್ಕೆ ಮಹಾಪೂಜೆ, ಸಂಜೆ 7 ಕ್ಕೆ ತಪ್ಪಂಗಾಯಿ ಬಲಿ, ರಾತ್ರಿ 8:30 ಕ್ಕೆ ದೂಳು ಮಂಡಲ, ನಂತರ ಭೂತಬಲಿ, ಕವಾಟಬಂಧನ, ಶಯನೋತ್ಸವ ಮಾ.15, ಶನಿವಾರ ಬೆಳಿಗ್ಗೆ 07-00 ಕ್ಕೆ ಕವಾಟೋದ್ಘಾಟನೆ, ನಂತರ ಮಹಾಪೂಜೆ, ಸಾಯಂಕಾಲ 05:00 ಕ್ಕೆ ಬಲಿ ಹೊರಟು ಕಟ್ಟೆಪೂಜೆ, ಅವಭೃತ ಸ್ನಾನ ನಡೆದು ಧ್ವಜಾವರೋಹಣಗೊಳ್ಳುವುದರ ಮೂಲಕ ಮೂರು ದಿನಗಳ ಗೌಣೋತ್ಸವು ಸಮಾಪ್ತಿಯಾಗುತ್ತದೆ. ಭಕ್ತಾದಿಗಳು ಕುಟುಂಬ ಸಮೇತರಾಗಿ ಆಗಮಿಸಿ, ಮಹೋತ್ಸವದಲ್ಲಿ ಭಾಗಿಯಾಗಿ ಶ್ರೀ ಬ್ರಹ್ಮಲಿಂಗೇಶ್ವರ ದೇವರ, ನಾಗದೇವರ ಹಾಗೂ ಶ್ರೀ ಧರ್ಮ ದೈವಗಳ ಕೃಪೆಗೆ ಪಾತ್ರರಾಗಿ ಸಿರಿಮುಡಿ ಗಂಧ ಪ್ರಸಾದ ಸ್ವೀಕರಿಸಿ ಕೃತಾರ್ಥರಾಗಬೇಕಾಗಿ ದೇವಸ್ಥಾನದ ಪ್ರಕಟಣೆಯು ತಿಳಿಸಿದೆ.
Additional image Additional image
12 Mar 2025, 10:00 AM
Category: Kaup
Tags: