ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮೇ.18 : ಕಟಪಾಡಿಯಲ್ಲಿ ಕರ್ನಾಟಕದಲ್ಲಿಯೇ ಪ್ರಪ್ರಥಮ ಸಂಪೂರ್ಣ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ

Posted On: 17-05-2025 08:34PM

ಕಟಪಾಡಿ : ಕಟಪಾಡಿ ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ (ರಿ.) ವತಿಯಿಂದ ಏಣಗುಡ್ಡೆ ಕುರ್ಕಾಲು ರಸ್ತೆಯ ರಿಶಾಲ್‌ ನಗರದ ಪಂಪಾ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುವ ಕರ್ನಾಟಕದಲ್ಲಿಯೇ ಪ್ರಪ್ರಥಮ ಸಂಪೂರ್ಣ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಮೇ.18, ಆದಿತ್ಯವಾರ ಬೆಳಗ್ಗೆ 9.47ಕ್ಕೆ ನಡೆಯಲಿದೆ.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಉಡುಪಿ ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಮತ್ತು ಗಣ್ಯರು ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶಿಲಾನ್ಯಾಸ, ನಿಧಿಕುಂಭ ಸ್ಥಾಪನೆ, ಮುಷ್ಠಿಕಾಣಿಕೆ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆ ನೆರವೇರಿಸಲಿರುವರು.

ಈ ದೇವಳದಲ್ಲಿ ಅಯೋಧ್ಯೆಯ ರಾಮನ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೃಷ್ಣಶಿಲೆಯಲ್ಲಿ ಕೆತ್ತಿದ ಅಯ್ಯಪ್ಪಸ್ವಾಮಿ ಮೂರ್ತಿ ಯನ್ನು ಪ್ರತಿಷ್ಠಾಪಿಸಲಾಗುವುದು.

ಕ್ಷೇತ್ರದ ಪ್ರಧಾನ ತಂತ್ರಿ ಪ್ರಕಾಶ ವಿ. ಹೊಳ್ಳ ಶಕ್ತಿನಗರ ಮಂಗಳೂರು ಇವರ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಎಂದು ಕಟಪಾಡಿ ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ಗುರುಸ್ವಾಮಿ ಸುರೇಶ್ ಜತ್ತನ್ ಕಟಪಾಡಿ, ಅಧ್ಯಕ್ಷ ರಿಯಾನ್ ಟಿ ಕಟಪಾಡಿ, ಕಾರ್ಯಾಧ್ಯಕ್ಷ ಕೇಶವ ಕುಂದರ್ ಕೊಡವೂರು, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಜಿ.ಸನಿಲ್ ಅಚ್ಚಡ ಕಟಪಾಡಿ ಇವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.