ಕುಕ್ಕುಂಜ, ಮಲಂಗೋಳಿ ರಸ್ತೆ ದುರಸ್ತಿಗೊಳಿಸುವಂತೆ ಬಿಜೆಪಿ ಕಾರ್ಯಕರ್ತರಿಂದ ಶಾಸಕರಿಗೆ ಮನವಿ
ಕಾಪು : ತಾಲೂಕಿನ ಕುತ್ಯಾರು ಗ್ತಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಂಜ, ಮಲಂಗೋಳಿ ಭಾಗದ ರಸ್ತೆ ದುರಸ್ತಿ ಸೇರಿದಂತೆ ಊರಿನ ಹಲವು ಬೇಡಿಕೆಗಳ ಕುರಿತು ಬಿಜೆಪಿ ಪಕ್ಷದ ಹಿರಿಯರಾದ ಪ್ರಭಾಕರ್ ಶೆಟ್ಟಿ ಪಡುಮನೆ ಕಳತ್ತೂರು ಮುಂದಾಳತ್ವದಲ್ಲಿ ಭಾನುವಾರ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಮನವಿ ನೀಡಲಾಯಿತು.
ಮನವಿ ಸ್ವೀಕರಿಸಿದ ಶಾಸಕರು ಶೀಘ್ರದಲ್ಲಿ ಎಲ್ಲಾ ಬೇಡಿಕೆಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಉದಯ ಕುಲಾಲ್, ಪ್ರದೀಶ್ ಶೆಟ್ಟಿ, ಪ್ರಥ್ವಿರಾಜ್ ಆರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
