ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮುಂಡಾಲ ಯುವ ವೇದಿಕೆ ಪಡುಬಿದ್ರಿ : ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Posted On: 01-06-2025 07:17PM

ಪಡುಬಿದ್ರಿ : ಇಲ್ಲಿನ ಮುಂಡಾಲ ಯುವ ವೇದಿಕೆಯ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಶೈಕ್ಷಣಿಕ ಪರಿಕರ ವಿತರಣಾ ಕಾರ್ಯಕ್ರಮ ರವಿವಾರ ಪಡುಬಿದ್ರಿ ಸಾಯಿ ಆರ್ಕೇಡ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ ನಿವೃತ್ತ ಬ್ಯಾಂಕ್ ಅಧಿಕಾರಿ ರವಿಂದ್ರ ಸಾಲ್ಯಾನ್ ವೇದಿಕೆಯ ಕಾರ್ಯವನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ವೇದಿಕೆಯ ಅಧ್ಯಕ್ಷರಾದ ಮಂಜುನಾಥ್ ಕರ್ಕೇರ ,ಕಾರ್ಯದರ್ಶಿ ನಿತಿನ್ ಸಾಲ್ಯಾನ್, ಕೋಶಾಧಿಕಾರಿ ಪ್ರಕಾಶ್ ಮುಂಡ್ಕೂರ್, ಪ್ರಮುಖರಾದ ಸುರೇಶ್ ಪಡುಬಿದ್ರಿ, ಶೇಖರ್ ಮುಂಡ್ಕೂರ್, ಪ್ರವೀಣ್ ಎರ್ಮಾಳ್, ಸೋಮಯ್ಯ ಎರ್ಮಾಳ್, ಮೋಹನ್ ಪಾದೆಬೆಟ್ಟು, ಕು.ಅಶ್ವಿನಿ ಸುವರ್ಣ, ಶಾಲಿನಿ ಸುರೇಶ್, ಭಾರತಿ ಪ್ರಸನ್ನ, ಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸುರೇಶ್ ಪಡುಬಿದ್ರಿ ನಿರೂಪಿಸಿ, ಪ್ರವೀಣ್ ಎರ್ಮಾಳ್ ವಂದಿಸಿದರು.