ಕಾಪು : ಮಜೂರು ಮದರಸದಲ್ಲಿ ಮಾದಕ ದ್ರವ್ಯದ ವಿರುದ್ದ ಅಭಿಯಾನ
Thumbnail
ಕಾಪು : ಸಮಾಜದಲ್ಲಿ ಅಮಲು ಪದಾರ್ಥದ ಉಪಯೋಗವು ಜಾಸ್ತಿಯಾಗುತಿದ್ದು ಮಾದಕ ದ್ರವ್ಯ ವಿರುದ್ಧದ ಅಭಿಯಾನಗಳು ಸಮಾಜದ ಕಣ್ಣು ತೆರೆಸಲು ಕಾರಣವಾಗಿರುತ್ತದೆ ಎಂದು ಮಸ್ಜಿದ್ ಅಧ್ಯಕ್ಷರಾದ ಡಾ. ಫಾರೂಕ್ ಚಂದ್ರನಗರ ತಿಳಿಸಿದರು. ಅವರು ಸಿರಾಜುಲ್ ಹುದಾ ಮದರಸ ಮಜೂರು -ಮಲ್ಲಾರು ಇದರ ವಿದ್ಯಾರ್ಥಿಗಳು ಸುನ್ನಿ ಬಾಲ ಸಂಘ ಇದರ ಅಧೀನದಲ್ಲಿ ನಡೆಸಿದ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದರು. ಮಜೂರ- ಮಲ್ಲಾರು ದಫ್ ಸಮಿತಿ ಯಂಗ್ಮೆನ್ಸ್ ಸಮಿತಿ, ಸ್ವಲಾತ್ ಸಮಿತಿ ಉತ್ತಮ ಕೆಲಸ ಮಾಡಿ ಜನ ಪ್ರೇರಣೆಯಾಗಿದೆ ಎಂದು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಜಮಾತ್ ಕತಿಬರಾದ ಅಬ್ದುರಶೀದ್ ಸಖಾಫಿ ಹಾಗೂ ಉಸ್ತಾದುರುಗಳು ಜಮಅತ್ ಸದಸ್ಯರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
07 Jun 2025, 01:31 PM
Category: Kaup
Tags: