ಕುತ್ಯಾರು : ದಿವಾಕರ್ ಆಚಾರ್ಯರಿಗೆ ಯಕ್ಷಗಾನ ಡಿಪ್ಲೋಮಾದಲ್ಲಿ ಡಿಸ್ಟಿಂಕ್ಷನ್
Posted On:
20-06-2025 02:57PM
ಕಾಪು : ಬೆಂಗಳೂರಿನ ಕಲಾಕದಂಬ ಆರ್ಟ್ ಸೆಂಟರ್ ನಿರ್ದೇಶಕ ಡಾ. ರಾಧಾಕೃಷ್ಣ ಉರಾಳ ಮಾರ್ಗದರ್ಶನದಲ್ಲಿ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪರೀಕ್ಷೆಗೆ ಹಾಜರಾದ ದಿವಾಕರ್ ಆಚಾರ್ಯ ಗೇರುಕಟ್ಟೆ ಇವರು ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು 2024-25 ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಯಕ್ಷಗಾನ ಸರ್ಟಿಫಿಕೇಟ್ ಮತ್ತು ಡಿಪ್ಲೋಮಾ ಕೋರ್ಸ್ ಗಳಿಗೆ ಇತ್ತೀಚಿಗೆ ಪರೀಕ್ಷೆಗಳನ್ನು ಬೆಂಗಳೂರಿನಲ್ಲಿ ನಡೆಸಿತ್ತು.
ಇವರು ಆನೆಗುಂದಿ ಸೂರ್ಯ ಚೈತನ್ಯ ಹೈಸ್ಕೂಲ್ ಕುತ್ಯಾರು ಶಾಲೆಯ ಶೈಕ್ಷಣಿಕ ಸಲಹೆಗಾರರಾಗಿದ್ದು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾಗಿ, ಹವ್ಯಾಸಿ ಕಲಾವಿದರಾಗಿ ಸಂಘಟಕರಾಗಿ ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾರ್ಯನಿರ್ವಹಿಸುತ್ತಿದ್ದಾರೆ.