ಬಂಟಕಲ್ಲು : ಶ್ರೀ ಯತಿ ಗುರುರಾಯ ತಂಡದ ಆಶ್ರಯದಲ್ಲಿ ಕೆಸರುಡ್ ಒಂಜಿ ದಿನ ಕಾರ್ಯಕ್ರಮ ಸಂಪನ್ನ
Posted On:
25-06-2025 09:52AM
ಬಂಟಕಲ್ಲು : ಇಲ್ಲಿನ ಶ್ರೀ ಯತಿ ಗುರುರಾಯ ತಂಡ ಆಶ್ರಯದಲ್ಲಿ ಕೆಸರುಡ್ ಒಂಜಿ ದಿನ ಕಾರ್ಯಕ್ರಮ 92 ನೇ ಹೇರೂರಿನ ವಿಜಯ್ ಧೀರಜ್ ಇವರ ಗದ್ದೆಯಲ್ಲಿ ನಡೆಯಿತು.
ಹೇರೂರು ಗುರುರಾಘವೇಂದ್ರ ಸಮಾಜ ಸೇವಾ ಮಂಡಳಿಯ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಸ್ವಾಮಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಹಿರಿಯರಾದ ಕೃಷಿ ವೃತ್ತಿಯನ್ನು ನಡೆಸುತ್ತಿದ್ದ ಶ್ರೀಮತಿ ಅಪ್ಪಿ ಸೇರಿಗಾರ್ತಿಯವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಶ್ರೀ ಗುರುರಾಘವೇಂದ್ರ ಸಮಾಜ ಸೇವಾ ಮಂಡಳಿಯ ಉಪಾಧ್ಯಕ್ಷ ಮಾಧವಾಚಾರ್ಯ, ಮಹಿಳಾ ಬಳಗದ ಉಪಾಧ್ಯಕ್ಷೆ ಸುನಿತಾ ಜಯ ಸೇರಿಗಾರ್, ಹೇರೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಮಂಜುಳಾ ಶೆಟ್ಟಿ, ಮಜೂರು ಗ್ರಾಮ ಪಂಚಾಯತ್ ಸದಸ್ಯ ವಿಜಯ ಧೀರಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾರ್ವಿ ನಾಯಕ್ ಪ್ರಾರ್ಥಿಸಿದರು.
ತಂಡದ ಅಧ್ಯಕ್ಷೆ ಅನಿತಾ ಉಮೇಶ್ ಸ್ವಾಗತಿಸಿದರು. ಬಹುಮಾನದ ವಿವರಣೆಯನ್ನು ಕಾರ್ಯದರ್ಶಿ ವಿದ್ಯಾಶ್ರೀ ಆಚಾರ್ಯ ವಾಚಿಸಿದರು. ಜ್ಯೋತಿ ಶ್ರೀಪತಿ ನಾಯಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.