ಕಾಪು : ಮುಟ್ಲಪಾಡಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕಾಪು : ಮುಟ್ಲಪಾಡಿ ಹಳೆ ವಿದ್ಯಾರ್ಥಿಗಳು, ಅಂಗನವಾಡಿ ಕೇಂದ್ರ ಮುಟ್ಲಪಾಡಿ ಹಾಗೂ ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ) ಕಡಂಬು ಮಟ್ಟಾರ್ ಆಶ್ರಯದಲ್ಲಿ ಮುಟ್ಲಪಾಡಿ ಶಾಲೆಯಲ್ಲಿ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು.
ಹಿರಿಯರಾದ ಸುಶೀಲ ಪೂಜಾರ್ತಿ, ವಿಶ್ವಕರ್ಮ ಸಂಘದ ಅಧ್ಯಕ್ಷರಾದ ಮಂಜುನಾಥ್ ಆಚಾರ್ಯ, ಅಂಗನವಾಡಿ ಶಿಕ್ಷಕಿ ನಿಶ್ಮಾ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮುಟ್ಲಪಾಡಿ ಶಾಲೆಯ ಹಳೆವಿದ್ಯಾರ್ಥಿಗಳು, ಶಾಲೆಯ ಮಕ್ಕಳು, ವಿಶ್ವಕರ್ಮ ಸಮಾಜ ಸೇವಾ ಸಂಘದ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡರು.
