ನಾರಾಯಣಗುರುಗಳಿಗೆ ಅವಮಾನ : ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ಖಂಡನೆ
Thumbnail
ಉಡುಪಿ : ಇಲ್ಲಿನ ನಗರಸಭೆಯಿಂದ ಅಧಿಕೃತವಾಗಿ ಸ್ಥಾಪನೆಗೊಂಡಿದ್ದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಯಾವುದೇ ಮುನ್ಸೂಚನೆ ಇಲ್ಲದೆ ಬನ್ನಂಜೆ ವೃತ್ತದಿಂದ ಕಿತ್ತು ಬಿಸಾಕಿ, ಉಡುಪಿ ನಗರ ಸಂಚಾರಿ ಠಾಣೆಯ ಪಾಲುಬಿದ್ದ ಜಾಗದ ಪೊದೆಗಳ ಮಧ್ಯೆ ಬಿಸಾಡಿದ್ದು, ಶ್ರೀ ನಾರಾಯಣ ಗುರುಗಳ ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮಫಲಕದ ವೃತ್ತವನ್ನು ರಚಿಸಿದ್ದು ಇದು ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ತೋರಿದ ದೊಡ್ಡ ಅಗೌರವ, ಇದನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯು ತೀವ್ರವಾಗಿ ಖಂಡಿಸಿದೆ. ಸ್ಥಳೀಯ ಜಿಲ್ಲಾಡಳಿತ ತಕ್ಷಣ ಹೆಚ್ಚೆತ್ತು ಸ್ಪಷ್ಟನೆಯನ್ನು ಕೊಡಬೇಕು ಇಲ್ಲದಿದ್ದಲ್ಲಿ ಇಡೀ ಸಮಾಜವನ್ನು ಒಗ್ಗೂಡಿಸಿಕೊಂಡು ಮುಂದಿನ ನಿರ್ಣಯವನ್ನು ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಮ್. ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
31 Aug 2025, 03:57 PM
Category: Kaup
Tags: