ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸಾರಿಗೆ ಇಲಾಖೆಯ ಸಹಾಯಕ ಆಯುಕ್ತರ ಭೇಟಿ
Thumbnail
ಕಾಪು : ಕರ್ನಾಟಕ ಸರಕಾರದ ಸಾರಿಗೆ ಇಲಾಖೆಯ ಸಹಾಯಕ ಆಯುಕ್ತರಾದ ಉಮಾ ಶಂಕರ್ ಅವರು ಭಾನುವಾರ ಪತ್ನಿ ಮತ್ತು ಪುತ್ರನೊಂದಿಗೆ ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಕಾಪು ಇಲ್ಲಿಗೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನವನ್ನು ಪಡೆದರು. ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನಲ್ಲಿ ಪ್ರಾರ್ಥಿಸಿ ಅನುಗ್ರಹ ಪ್ರಸಾದವನ್ನು ನೀಡಿದರು. ದೇವಳದ ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ವತಿಯಿಂದ ಗೌರವಿಸಲಾಯಿತು. ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಮತ್ತು ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಅವರು ಜೀರ್ಣೋದ್ಧಾರ ನಡೆದು ಬಂದ ಹಾದಿ ಹಾಗೂ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ವಿವರಣೆಯನ್ನು ನೀಡಿದರು.
01 Sep 2025, 10:55 AM
Category: Kaup
Tags: