ಉಡುಪಿ-ಉಚ್ಚಿಲ ದಸರಾ 2025 ; ವೈಭವದ ದಸರಾ ಸಂಪನ್ನ
Thumbnail
ಪಡುಬಿದ್ರಿ : ದ. ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುತ್ತಿರುವ 'ಉಡುಪಿ-ಉಚ್ಚಿಲ ದಸರಾ 2025' ಇದರ 4ನೇ ವರ್ಷದ 'ಉಡುಪಿ ಉಚ್ಚಿಲ ದಸರಾ' ವೈಭವ ಸಂಪನ್ನವಾಗಿದೆ. ವಿಸರ್ಜನೆಗೆ ಮೊದಲು ನಡೆದ ವರ್ಣರಂಜಿತ ಶೋಭಾಯಾತ್ರೆ ಮೆರವಣಿಯು ಜರಗಿತು. ಉಚ್ಚಿಲ ದಸರಾ ಉತ್ಸವ ಪ್ರಯುಕ್ತ ಶಾಲಿನಿ ಜಿ ಶಂಕರ್ ತೆರೆದ ಸಭಾಭವನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ಜಲಸ್ತಂಭನಾ ಕಾರ್ಯವು ಸಾವಿರಾರು ಜನರ ಸಮ್ಮುಖದಲ್ಲಿ ಕಾಪು ಬೀಚಿನ ಶಿಲ್ಪಾ ಗಂಗಾಧರ ಸುವರ್ಣರವರ ರೆಸಾರ್ಟ್ ಕಡಲ ತೀರದಲ್ಲಿ ನೆರೆವೇರಿತು. ವಿಷೇಶವಾಗಿ ಕಾಶಿ ಗಂಗಾತೀರದಲ್ಲಿ ಗಂಗಾರತಿ ನಡೆಸುವ ಅರ್ಚಕರು ಉಡುಪಿ – ಉಚ್ಚಿಲ ದಸರಾಕ್ಕೆ ಆಗಮಿಸಿ ಸಮುದ್ರ ದೇವಿ, ನವ ದುರ್ಗೆಯರು ಮತ್ತು ಮಾತೆ ಶಾರದೆಗೆ ಆರತಿ ಬೆಳಗಿದ್ದಾರೆ. ಸಾವಿರಾರು ಭಕ್ತಾಧಿಗಳು ಈ ಪ್ರಕ್ರಿಯೆಯನ್ನು ಕಣ್ದುಂಬಿಕೊಂಡರು. ಮಹಿಳೆಯರಿಂದ ಆರತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಭಾಗಿ ಆದ ಸಾವಿರಾರು ಮಹಿಳೆಯರು ಆರತಿ ಬೆಳಗಿ ಪುನೀತರಾದರು. ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಕೆ ವಿ ರಾಘವೇಂದ್ರ ಉಪಾಧ್ಯಾಯರಿಂದ ನವ ದುರ್ಗೆಯರು ಮತ್ತು ಶಾರದೆ ಮಾತೆಗೆ ವಿಸರ್ಜನಾ ಪೂಜೆಯ ಬಳಿಕ ಜಲಸ್ಥಂಭನಕ್ಕೆ ಚಾಲನೆ ದೊರೆಯಿತು. ಕಳೆದ 11 ದಿನಗಳಿಂದ ನಡೆದ ದಸರಾ ಉತ್ಸವವು ನವದುರ್ಗೆಯರ ಸಹಿತ ಶಾರದಾ ಮಾತೆಯ ಮೃಣ್ಮಯ ವಿಗ್ರಹಗಳ ಜಲಸ್ಥಂಭನದೊಂದಿಗೆ ಸಮಾಪನಗೊಂಡಿದೆ. ಈ ಸಂದರ್ಭ ದಸರಾ ರೂವಾರಿ ನಾಡೋಜ ಡಾ. ಜಿ. ಶಂಕರ್, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೊಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷರಾದ ಮೋಹನ್ ಬೇಂಗ್ರೆ, ದಿನೇಶ್ ಎರ್ಮಾಳು, ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರಾಡಳಿಯ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಉಚ್ಚಿಲ ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನೀಲ್, ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಉದ್ಯಮಿ ಸಾಧು ಸಾಲ್ಯಾನ್, ಉದಯ ಕುಮಾರ್ ಹಟ್ಟಿಯಂಗಡಿ, ಯುವರಾಜ್ ಕಿದಿಯೂರು ಮಸ್ಕತ್, ಉಷಾ ರಾಣಿ ಮಂಗಳೂರು, ಮನೋಜ್ ಕಾಂಚನ್, ಸುಜಿತ್ ಸಾಲ್ಯಾನ್, ಸತೀಶ್ ಕಾಂಚನ್, ಶಿವಕುಮಾರ್ ಮೆಂಡನ್, ಸುಗುಣ ಕರ್ಕೇರ, ಪದ್ಮಾಕರ್, ಕೇಶವ ಕೋಟ್ಯಾನ್, ಗಿರೀಶ್ ಕುಮಾರ್, ಶಿಲ್ಪಾ ಗಂಗಾಧರ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು ಮತ್ತು ದೇವಳದ ಪ್ರಧಾನ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕರೆ ಉಪಸ್ಥಿತರಿದ್ದರು.
Additional image Additional image
03 Oct 2025, 06:56 PM
Category: Kaup
Tags: