ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರ ವಳದೂರು ನಾರಾಯಣ ಶೆಟ್ಟಿ ನಿಧನ
ಕಾಪು : ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಆಡಳಿತ ಧರ್ಮದರ್ಶಿಗಳು, ದೈವ ಭಕ್ತರೂ, ಪರೋಪಕಾರಿಗಳು, ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿಯ ವಿಶೇಷ ಆರಾಧಕರೂ ಆದ ವಳದೂರು ನಾರಾಯಣ ಶೆಟ್ಟಿಯವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಬೆಳಿಗ್ಗೆ ಸ್ವರ್ಗಸ್ಥರಾಗಿರುತ್ತಾರೆ.
ಇವರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ.
