ಕಾರ್ಕಳ : ವಿಶ್ವಕರ್ಮ ಸಹಕಾರ ಬ್ಯಾಂಕ್ ಇದರ ಸ್ವರ್ಣ ಮಹೋತ್ಸವ - ಸ್ವಚ್ಛತಾ ಕಾರ್ಯಕ್ರಮ
Thumbnail
ಕಾರ್ಕಳ : ವಿಶ್ವಕರ್ಮ ಸಹಕಾರ ಬ್ಯಾಂಕ್ ಇದರ ಸ್ವರ್ಣ ಮಹೋತ್ಸವದ ಪ್ರಯುಕ್ತ ಕಾರ್ಕಳ ಶಾಖೆಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ಜರುಗಿತು. ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಹರೀಶ್ ಆಚಾರ್ ಮಾತನಾಡಿ, ಆರ್ಥಿಕ ಸಂಸ್ಥೆಗೆ ಸಾಮಾಜಿಕ ಜವಾಬ್ದಾರಿ ಕೂಡ ಇರುವುದರಿಂದ ಸಾಮಾಜಿಕ ಜವಾಬ್ದಾರಿಯನ್ನು ಮೂಡಿಸುವ ಉದ್ದೇಶದಿಂದ ಸ್ವಚ್ಛ ಭಾರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಮಾಜಿ ಪುರಸಭಾಧ್ಯಕ್ಷ, ಕೆಎಂಪಿಯ ಜಿಲ್ಲಾಧ್ಯಕ್ಷರಾದ ಪ್ರಕಾಶ್ ರಾವ್ ಮಾತನಾಡಿ, ಬ್ಯಾಂಕ್ ಕೇವಲ ಠೇವಣಿ ಸಂಗ್ರಹಣೆಯ ಜೊತೆಗೆ ಸ್ವಚ್ಛತೆಯ ಕಾರ್ಯಕ್ರಮ ಹಮ್ಮಿಕೊಂಡು, ಮುಂದಿನ 10 ತಿಂಗಳು ನಿರಂತರ ಕಾರ್ಯಕ್ರಮ ಹಮ್ಮಿಕೊಂಡ ಬಗ್ಗೆ ಸಂತಸ ವ್ಯಕ್ತ ಪಡಿಸಿದರು. ರೋಟರಿ ಕ್ಲಬ್ ಅಧ್ಯಕ್ಷರಾದ ಸುರೇಂದ್ರ ನಾಯಕ್, ಚಿನ್ನದ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾದ ಎಂ ರಮೇಶ್ ಆಚಾರ್ಯ, ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ಇದರ ಸ್ಥಾಪಕ ಅಧ್ಯಕ್ಷರಾದ ಜ್ಯೋತಿ ರಮೇಶ್, ಕಾಳಿಕಾಂಬಾ ದೇವಸ್ಥಾನದ 1 ನೇ ಜೊತೆ ಮುಕೇಸ್ತರರಾದ ಪಿ ರವಿ ಆಚಾರ್ಯ, ಸ್ವಚ್ಚ ಬ್ರಿಗೇಡ್ ನ ಪಿಲಿಕ್ಸ್ ವಸ್, ವಕೀಲರ ಸಂಘ ಕಾರ್ಕಳ ಇದರ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಹಾಗೂ ಭುವನೇಂದ್ರ ಕಾಲೇಜಿನ ಶಂಕರ್ ಕುಡ್ವ ಹಾಗೂ ಎನ್ ಎಸ್ ಎಸ್ ನ ವಿದ್ಯಾರ್ಥಿಗಳು, ಸ್ವಚ್ಛ ಕಾರ್ಕಳ ಬ್ರಿಗೇಡ್ ಇದರ ಸದಸ್ಯರು, ಜ್ಯೋತಿ ಯುವಕ ಮಂಡಲದ ಅಧ್ಯಕ್ಷರಾದ ಪ್ರಶಾಂತ್ ಹಾಗೂ ಎಲ್ಲಾ ಸಂಘ ಸಂಸ್ಥೆಯ ಸದಸ್ಯರು ಭಾಗವಹಿಸಿದ್ದರು.
21 Oct 2025, 01:32 PM
Category: Kaup
Tags: