ಡಿ 12 : ಕಾಪುವಿನಲ್ಲಿ ಸಮಾಜರತ್ನ ದಿ.ಕೆ. ಲೀಲಾಧರ ಶೆಟ್ಟಿ ಮತ್ತು ದಿ. ವಸುಂಧರಾ ಎಲ್ ಶೆಟ್ಟಿ ಪುಣ್ಯಸ್ಮರಣೆ
ಕಾಪು : ಸಮಾಜ ಸೇವಕ ಸೂರಿ ಶೆಟ್ಟಿ ಕಾಪು ಹಾಗೂ ಸರ್ವ ಧರ್ಮದ ಬಂಧುಗಳ ಸಹಕಾರದೊಂದಿಗೆ ಸಮಾಜ ರತ್ನ ಕೆ. ದಿ. ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ದಿ. ವಸುಂದರಾ ಶೆಟ್ಟಿ ಅವರ ದ್ವಿತೀಯ ವರ್ಷದ ಸಂಸ್ಮರಣೆಯೊಂದಿಗೆ ಡಿ. 12 ರಂದು ಮಜೂರು ಸರ್ಕಲ್ ಬಳಿಯ ಲೀಲಾಧರ ಶೆಟ್ಟಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ, ನಂತರ ಕಾಪು ಶ್ರೀ ವೀರಭದ್ರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಅವರ ಹೆಸರಿನಲ್ಲಿ ಪೂಜೆ, ನಂತರ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆಯ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ, ಗಣ್ಯರ ಉಪಸ್ಥಿತಿಯಲ್ಲಿ ಎಸ್ ಎಸ್ಎಲ್ ಸಿ ಪರೀಕ್ಷೆಯಲ್ಲಿ 2024-2025 ಸಾಲಿನಲ್ಲಿ (ಅನುದಾನಿತ ಶಾಲೆ )ಹೆಚ್ಚು ಅಂಕ ಗಳಿಸಿದ 10 ವಿದ್ಯಾರ್ಥಿಗಳಿಗೆ ನಗದಿನೊಂದಿಗೆ ಸನ್ಮಾನ, ಹಾಗೂ 3 ಮಂದಿ ಮಾಜಿ ಸೈನಿಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ಸಮಾಜ ರತ್ನ ಕೆ. ಲೀಲಾಧರ ಶೆಟ್ಟಿ ಅಭಿಮಾನಿ ಬಳಗ ಕಾಪು ಇವರ ಪ್ರಕಟಣೆಯು ತಿಳಿಸಿದೆ.
