ಕಾಪುವಿನಲ್ಲಿ ಅಟಲ್ ಜನ್ಮಶತಾಬ್ದಿ ಪ್ರಯುಕ್ತ ”ಕಾಪು ಕಡಲ ಪರ್ಬ” ಉದ್ಘಾಟನೆ
Thumbnail

ಕಾಪು : ಕಾಪು ಪಡು ಕಡಲ ಕಿನಾರೆಯಲ್ಲಿ ಶುಕ್ರವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ದಿ ಪ್ರಯುಕ್ತ ಬಿಜೆಪಿ ಕಾಪು ಮಂಡಲದ ವತಿಯಿಂದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಡಿ. 26, 27, 28 ರಂದು ಮೂರು ದಿನಗಳ ಕಾಲ ನಡೆಯುತ್ತಿರುವ ಕಾಪು ಕಡಲ ಪರ್ಬವನ್ನು ಶುಕ್ರವಾರ ಸಂಜೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿಯವರು ಕೀರ್ತಿಶೇಷ ಡಾ. ವಿ. ಎಸ್. ಆಚಾರ್ಯ ಸ್ಮರಣೆಯ ದಿ. ಲೀಲಾಧರ ಶೆಟ್ಟಿ ವೇದಿಕೆಯಲ್ಲಿ ತೆಂಗಿನ ಸಿರಿಯನ್ನು ಅರಳಿಸುವ ಮೂಲಕ ಉದ್ಘಾಟಿಸಿದರು.

   ಬಳಿಕ ಮಾತನಾಡಿದ ಅವರು ಅಟಲ್ ಬಿಹಾರಿ ವಾಜಪೇಯಿ ಅವರು ನಮ್ಮ ನಡುವೆ ಸೂರ್ಯನಂತಿದ್ದು, ನಿಷ್ಕಳಂಕ ರಾಜಕಾರಣಿಯಾಗಿ ನಮಗೆಲ್ಲರಿಗೂ ಪ್ರೇರಣೆಯಾಗಿದ್ದಾರೆ. ಸಂಪೂರ್ಣ ಭ್ರಷ್ಟಾಚಾರ ತುಂಬಿದ್ದ ಕಾಂಗ್ರೆಸ್ ಆಳ್ವಿಕೆಯ ಕಾಲದಲ್ಲಿಯೂ ನಿಷ್ಕಳಂಕ ರಾಜಕಾರಣಿಯಾಗಿ ಬೆಳೆದು ನಿಂತಿರುವ ಅಟಲ್ ಜೀ ಅವರು ದೇಶ ಕಂಡ ಅಪ್ರತಿಮ ರಾಜಕಾರಣಿ. ಅಳಿಯಲಾರದ ರಾಜಕೀಯ ಶಕ್ತಿಯಾಗಿದ್ದಾರೆ ಎಂದರು.

  ಅಟಲ್ ಜೀ-ಅಡ್ವಾನಿಯವರಂತೆ  ಬಿಜೆಪಿಯಲ್ಲಿ ಲಾಲಾಜಿ ಮೆಂಡನ್- ಗುರ್ಮೆ ಸುರೇಶ್ ಶೆಟ್ಟಿ  ಅವರುಗಳು ಬಿಜೆಪಿ ರಾಜಕಾರಣದಲ್ಲಿ ಆದರ್ಶ ಮತ್ತು ಪ್ರೇರಣಾದಾಯಕ ವ್ಯಕ್ತಿಗಳಾಗಿದ್ದಾರೆ. ಕಾಪುವಿನ ಕಡಲ ಕಿನಾರೆಯಲ್ಲಿ ಅದ್ದೂರಿಯಾಗಿ ಅಟಲ್ ಬಿಹಾರಿ ವಾಜಪೇಯಿ ಆವರ ಜನ್ಮಶತಾಬ್ದಿ ಪ್ರಯುಕ್ತ ಆಯೋಜಿಸಿದ ಕಡಲ ಪರ್ಬ ವಿಶೇಷತೆಯಿಂದಾಗಿ ರಾಜ್ಯಕ್ಕೆ ಮಾದರಿಯಾಗಿದೆ. ಇದು ರಾಷ್ಟ್ರ ಮಟ್ಟದಲ್ಲಿಯೂ ಗುರುತಿಸುವಂತೆ ಆಗಿದೆ ಎಂದೂ ಛಲವಾದಿ ನಾರಾಯಣ ಸ್ವಾಮಿ ಹೇಳಿದರು.  

    ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಪ್ರಾಸಾವಿಕವಾಗಿ ಮಾತನಾಡಿದರು.

   ಕಾಪು ಕಡಲ ಪರ್ಬದ ಗೌರಾವಾಧ್ಯಕ್ಷ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಅಧ್ಯಕ್ಷತೆ ವಹಿಸಿದ್ದರು.

  ವೇದಿಕೆಯಲ್ಲಿ ಹಿರಿಯ ಬಿಜೆಪಿಗರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.
  ವೇದಿಕೆಯಲ್ಲಿಆಟಲ್ ಜೀ ಶತಮಾನೋತ್ಸವ ಸಮಿತಿಯ ರಾಜ್ಯ ಸಂಚಾಲಕ ಜಗದೀಶ್ ಹಿರೇಮನಿ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಕಾರ್ಕಳ  ಶಾಸಕ ಸುನಿಲ್ ವಿ. ಕುಮಾರ್, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಧನಂಜಯ ಸರ್ಜಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಮುಲ್ಕಿ-ಮೂಡಬಿದ್ರಿ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಜ್ಯ ಬಿಜೆಪಿ  ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ,  ಮಾಜಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ ವೇದಿಕೆಯಲ್ಲಿದ್ದರು.

  ಕಾಪು ಬಿಜೆಪಿ ಅಧ್ಯಕ್ಷ  ಜಿತೇಂದ್ರ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ವಂದಿಸಿದರು. 
  ಕಾಪು ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಆಳ್ವ, ಸತೀಶ್ ಶೆಟ್ಟಿ ಗುಡ್ಡೆಚ್ಚಿ, ನಿತೇಶ್ ಎಕ್ಕಾರು ನಿರೂಪಿಸಿದರು. 

  ಜಗದೀಶ್ ಆಚಾರ್ಯ ಪುತ್ತೂರು, ಇವರಿಂದ ಸಂಗೀತ ರಸಮಂಜರಿ, ಕಾಪು ರಂಗತರಂಗ ತಂಡದಿಂದ ತುಳು ಸಾಮಾಜಿಕ, ಹಾಸ್ಯಮಯ ನಾಟಕ “ಶೋಬಾಜಿ” ಪ್ರದರ್ಶನಗೊಂಡಿತು.

27 Dec 2025, 05:30 PM
Category: Kaup
Tags: