ಏ.23 - ಮೇ 4 : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಪುನಃ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ
Thumbnail

ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ. ಕೆ ಪ್ರಕಾಶ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಹಾಗೂ ಭಕ್ತರ ಸಭೆಯಲ್ಲಿ 2026ರ  ಏ.23 ರಿಂದ ಮೊದಲ್ಗೊಂಡು ಮೇ 3 ರ ಪರ್ಯಂತ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ  ಪುನಃ ಪ್ರತಿಷ್ಣೆ ಹಾಗೂ ಬ್ರಹ್ಮಕಲಶಾಭಿಷೇಕ ನೆರವೇರಿಸುವುದೆಂದು ನಿಶ್ಚಯಿಸಲಾಗಿದೆ.

ಶ್ರೀ ಕ್ಷೇತ್ರದ ತಂತ್ರಿಗಳಾದ ಕಂಬಳಕಟ್ಟ ಶ್ರೀ ರಾಧಾಕೃಷ್ಣ ಉಪಾಧ್ಯಾಯರ ಮಾರ್ಗದರ್ಶನದಂತೆ  ಏ. 29ರಂದು ಶ್ರೀಮಹಾಲಿಂಗೇಶ್ವರ ದೇವರ ಪುನ: ಪ್ರತಿಷ್ಠೆ ಮತ್ತು  ಏ.30ಕ್ಕೆ ಶ್ರೀ ಮಹಾಗಣಪತಿ ದೇವರ ಪುನ: ಪ್ರತಿಷ್ಠೆ ಹಾಗೂ ಮೇ 2 ರಂದು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶಾಭಿಷೇಕ, ಮೇ. 3 ರಂದು ಶ್ರೀ ಮಹಾಗಣಪತಿ ದೇವರಿಗೆ ಬ್ರಹ್ಮಕಲಶಾಭಿಷೇಕ. ಮೇ 4ರಂದು ಸಂಪ್ರೋಕ್ಷಣೆ ಹಾಗೂ ಮಂತ್ರಾಕ್ಷತೆ  ನಡೆಯಲಿದೆ. 

ಶ್ರೀದೇವಳದ ಅನುವಂಶಿಕ ಮೊಕ್ತೇಸರರಾದ  ರತ್ನಾಕರ ರಾಜ್ ಕಿನ್ಯಕ್ಕ‌ ಬಳ್ಳಾಲ್, ಪೇಟೆ ಮನೆ ಭವಾನಿ ಶಂಕರ ಹೆಗ್ಡೆ ಮತ್ತು ಕೊರ್ನಾಯ ಶ್ರೀಪತಿ ರಾವ್ ಉಪಸ್ಥಿತರಿದ್ದರು. 

08 Feb 2026, 11:20 PM
Category: Kaup
Tags: