ಪಡುಬಿದ್ರಿ ದೇಗುಲದ ಜೀರ್ಣೋದ್ಧಾರ ಪ್ರಯುಕ್ತ ಹೊರೆ ಕಾಣಿಕೆ - ವಿವಿಧ ಸಮಾಜದ ಪ್ರಮುಖರ ಪೂರ್ವಭಾವಿ ಸಭೆ
Thumbnail

ಪಡುಬಿದ್ರಿ : ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ  ಜೀರ್ಣೋದ್ಧಾರ ಪ್ರಕ್ರಿಯೆಯಲ್ಲಿ ಭಾಗಿಯಾಗುವುದು ನಮ್ಮ ಸೌಭಾಗ್ಯ. ಹೊರೆ ಕಾಣಿಕೆಯ ಮೇಲೆ ಕಾರ್ಯಕ್ರಮದ ಯಶಸ್ಸು ನಿಂತಿದೆ. ದೇವ ಋಣ ತೀರಿಸುವ ಸಮಯ ಬಂದಿದೆ. ನಾವೆಲ್ಲ ಭಾಗಿಯಾಗೋಣ ಎಂದು ಕಾಪು ಶಾಸಕ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಅವರು ಭಾನುವಾರ ಪಡುಬಿದ್ರಿ ಬಂಟರ ಸಂಘದ ಸಭಾಂಗಣದಲ್ಲಿ ವಿವಿಧ ಸಮಾಜದ ಪ್ರಮುಖರ ಸಮ್ಮುಖದಲ್ಲಿ ಎ.26ರಂದು ಜರಗಲಿರುವ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ಪ್ರಯುಕ್ತ ಹಸಿರು ಹೊರೆ ಕಾಣಿಕೆ ಸಲ್ಲಿಸುವ ಬಗ್ಗೆ ನಡೆದ ಸಮಿತಿಯ ರ್ಪೂಭಾವಿ ಸಭೆಯಲ್ಲಿ ಮಾತನಾಡಿದರು.

ಹೊರೆ ಕಾಣಿಕೆ ಸಮಿತಿಯ ಪ್ರಧಾನ ಸಂಚಾಲಕ ಡಾ. ದೇವಿಪ್ರಸಾದ್ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿ, ಎ. 26 ರಂದು ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಬೃಹತ್ ಹೊರೆಕಾಣಿಕೆಯ ಸಂಕಲ್ಪ ಮಾಡಲಾಗಿದೆ. ಪಡುಬಿದ್ರಿ ಒಡೆಯನ ಜೀರ್ಣೋದ್ಧಾರಕ್ಕೆ ಅಳಿಲ ಸೇವೆ ಮಾಡಬೇಕೆಂಬುದು ಸರ್ವರ ಇಚ್ಛೆ. ಒಂದು  ಸಾವಿರಕ್ಕೂ ಅಧಿಕ ವಾಹನದ ಮೂಲಕ ದ.ಕ, ಉಡುಪಿ ಜಿಲ್ಲೆ, ಹುಬ್ಬಳ್ಳಿ, ಧಾರವಾಡ, ಬೆಂಗಳೂರು, ಪುಣೆ, ಶಿವಮೊಗ್ಗದಿಂದ ಹೊರೆ ಕಾಣಿಕೆ ಬರಲಿದೆ. ಹೊರೆ ಕಾಣಿಕೆಯ ಮೂಲಕ ಚರಿತ್ರೆ ನಿರ್ಮಾಣವಾಗಬೇಕು ಎಂದರು. 

ಹೊರೆ ಕಾಣಿಕೆ ಸಮರ್ಪಣೆಯ ಕಾರ್ಯಕ್ರಮಕ್ಕಾಗಿ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ವತಿಯಿಂದ ನೀಡಲ್ಪಟ್ಟ ಮೊದಲ ಚೆಕ್ ನ್ನು  ಹಸ್ತಾಂತರಿಸಲಾಯಿತು.

ಈ ಸಂದರ್ಭ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದ ಅನುವಂಶಿಕ ಮೊಕ್ತೇಸರರಾದ ರತ್ನಾಕರ ರಾಜ್ ಅರಸ್ ಕಿನ್ಯಕ್ಕ ಬಲ್ಲಾಳರು ಮತ್ತು ಪಡುಬಿದ್ರಿ ಪೇಟೆಮನೆ ಭವಾನಿ ಶಂಕರ ಹೆಗ್ಡೆ, ಜೀರ್ಣೕೊದ್ಧಾರ ಸಮಿತಿಯ ಉಪಾಧ್ಯಕ್ಷ ಪಿ. ರವೀಂದ್ರನಾಥ ಜಿ. ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಮುರಳೀನಾಥ ಶೆಟ್ಟಿ, ದೇಗುಲದ ಕಾರ್ಯನಿರ್ವಹಣಾಧಿಕಾರಿ ಕೆ. ರಾಜಗೋಪಾಲ ಉಪಾಧ್ಯಾಯ, ನವೀನ್ ಚಂದ್ರ ಜೆ. ಶೆಟ್ಟಿ, ಪಿಕೆ ಸದಾನಂದ, ವಿಶು ಕುಮಾರ್ ಶೆಟ್ಟಿ ಬಾಲ್, ವೈ. ಸುಕುಮಾರ್, ವೈ. ಎನ್. ರಾಮಚಂದ್ರ ರಾವ್, ಲಕ್ಷ್ಮಣ ಶೆಟ್ಟಿ ಬಾಲ್, ಚಂದ್ರಹಾಸ ಶೆಟ್ಟಿ, ರತ್ನಾಕರ ಶೆಟ್ಟಿ ನಡುಕೆರೆ, ಜಯ ಕೋಟ್ಯಾನ್, ರಮಾಕಾಂತ ರಾವ್,  ಶ್ರೀಮತಿ ಗೀತಾಂಜಲಿ ಸುವರ್ಣ, ಸುಗ್ಗಿ ಸುಧಾಕರ ಶೆಟ್ಟಿ, ಶ್ರೀಮತಿ ಮಮತಾ ಶೆಟ್ಟಿ, ಸುಧಾಕರ ಸಾಲ್ಯಾನ್, ಕೃಷ್ಣ ಬಂಗೇರ, ಸೋಮಶೇಖರ್, ವಿಠ್ಠಲ ಗುರಿಕಾರ, ಸುರೇಶ್, ಅಶೋಕ್ ಶೆಟ್ಟಿ, ಹರಿನಾಥ್, ಅಶೋಕ್ ಸಾಲ್ಯಾನ್, ಹರಿಯಪ್ಪ ಕೋಟ್ಯಾನ್, ಪ್ರಶಾಂತ್ ಶೆಣೈ, ಭರತ್ ದೇವಾಡಿಗ, ಪ್ರಕಾಶ್ ದೇವಾಡಿಗ, ಲಕ್ಷ್ಮಣ ಪೂಜಾರಿ, ರವೀಂದ್ರನಾಥ ಶೆಟ್ಟಿ, ಬಾಲಾಜಿ ಯೋಗೀಶ್ ಶೆಟ್ಟಿ, ಶ್ರೀನಾಥ್ ಹೆಗ್ಡೆ, ರವಿ ಶೆಟ್ಟಿ ಗುಂಡ್ಲಾಡಿ, ಪ್ರಕಾಶ್ ಶೆಟ್ಟಿ ಪಡುಹಿತ್ಲು ಮತ್ತಿತರರು ಉಪಸ್ಥಿತರಿದ್ದರು.

 ಹೊರೆ ಕಾಣಿಕೆ ಸಮಿತಿಯ ಪ್ರಧಾನ ಸಂಚಾಲಕ ಡಾ. ದೇವಿಪ್ರಸಾದ್ ಶೆಟ್ಟಿ  ಸ್ವಾಗತಿಸಿದರು. ಜಯ ಶೆಟ್ಟಿ ಪದ್ರ ಮತ್ತು ಸತೀಶ್ ಶೆಟ್ಟಿ ಗುಡ್ಡೆಚ್ಚಿ ನಿರೂಪಿಸಿದರು.

Additional image
05 Apr 2026, 07:26 PM
Category: Kaup
Tags: