ಕಾಪು : ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
Thumbnail

ಕಾಪು : ಇಲ್ಲಿನ ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನವನ್ನು ಮಂಗಳವಾರ   ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಎಂ.ನೀಲಾನಂದ ನಾಯ್ಕ್ ಇವರು ದೀಪ ಬೆಳಗಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ  ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಕೃಪ ಅಮ್ಮನ್ನ , ಜಾನೆಟ್, ಕಾಲೇಜು ಉಪನ್ಯಾಸಕರಾದ ಸೂರಥ್ ಕುಮಾರ್ ಹಾಗೂ ಶಿಕ್ಷಕ -ಶಿಕ್ಷಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

14 Apr 2026, 07:49 PM
Category: Kaup
Tags: