ಪಡುಬಿದ್ರಿ ದೇವಳದ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ಅಶೋಕ್ ಸಾಲ್ಯಾನ್, ಸಂತೋಷ್ ಪಡುಬಿದ್ರಿಯವರಿಗೆ ಸನ್ಮಾನ
ಪಡುಬಿದ್ರಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ಪಡುಬಿದ್ರಿ ಕಾಡಿಪಟ್ನ ಮೊಗವೀರ ಮಹಾಸಭಾವು ದೇವಸ್ಥಾನದ ಜೀರ್ಣೋದ್ಧಾರಕ್ಕೆ ನೀಡಿದ ಕೊಡುಗೆ ಹಾಗೂ ಸೇವೆಗಾಗಿ ಸಂಸ್ಥೆಯ ಅಧ್ಯಕ್ಷರಾದ ಅಶೋಕ್ ಸಾಲ್ಯಾನ್ ಹಾಗೂ ಪ್ರಧಾನ ಕಾರ್ಯದರ್ಶಿ ಸಂತೋಷ್ ಪಡುಬಿದ್ರಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ದೇವಳದ ಜೀಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ.ಕೆ.ಪ್ರಕಾಶ್ ಶೆಟ್ಟಿ ಸಹಿತ ಗಣ್ಯರು ಉಪಸ್ಥಿತರಿದ್ದರು.
