ಕಾಪು : ಕರಾವಳಿ ಕರ್ನಾಟಕದಲ್ಲಿ ಶಿಕ್ಷಣಕ್ಕೆ ಹೆಸರು ವಾಸಿಯಾಗಿರುವ ತ್ರಿಶಾ ಸಮೂಹ ಸಂಸ್ಥೆಗಳು ಇದರ ಅಂಗ ಸಂಸ್ಥೆಯಾದ ತ್ರಿಶಾ ವಿದ್ಯಾ ಕಾಲೇಜ್ ಆಪ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಮತ್ತು ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜು ಕಟಪಾಡಿ ಕಾಲೇಜಿನ ಪ್ಲೇಸ್ ಮೆಂಟ್ ಸೆಲ್ ವಿಭಾಗ ಮೊತ್ತ ಮೊದಲ ಬಾರಿಗೆ ಕಟಪಾಡಿಯಲ್ಲಿ ಮೇ 22 ರಂದು ತ್ರಿಶಾ ವಿದ್ಯಾ ಕಾಲೇಜು ಕಟಪಾಡಿಯಲ್ಲಿ ಅಭ್ಯುದಯ - ಉದ್ಯೋಗ ಮೇಳ ಆಯೋಜಿಸುತ್ತಿದೆ ಎಂದು ತ್ರಿಶಾ ವಿದ್ಯಾ ಕಾಲೇಜ್ ಆಪ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಪ್ರಾಂಶುಪಾಲರಾದ ಪ್ರೊ. ವಿಘ್ನೇಶ್ ಶೆಣೈ ಹೇಳಿದರು.
ಅವರು ಶುಕ್ರವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕರ್ನಾಟಕದ ಪ್ರತಿಷ್ಠಿತ 40ಕ್ಕೂ ಹೆಚ್ಚಿನ ಸಂಸ್ಥೆಗಳಿಂದ ಉದ್ಯೋಗಿಗಳನ್ನ ಆರಿಸಿಕೊಳ್ಳುವುದಕ್ಕೆ ಸಂದರ್ಶನ ಲಭ್ಯವಿರುತ್ತದೆ. ಇಲ್ಲಿ ಪದವಿ, ಸ್ನಾತಕೋತ್ತರ ಪದವಿ, ಐಟಿ, ಬಿಫಾರ್ಮಾ, ನರ್ಸಿಂಗ್ ಹೀಗೆ ವಿವಿದ ವಿದ್ಯಾಭ್ಯಾಸಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಸಂಧರ್ಶನದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗ ಆಕಾಂಕ್ಷಿಗಳಿಗೆ ಮೇ 19 ಮತ್ತು 20 ರಂದು ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಇಲ್ಲಿ ಸಂದರ್ಶನವನ್ನು ಎದುರಿಸುವ ರೀತಿ, ಸಿವಿಗಳನ್ನು ಬರೆಯುವುದು ಹೇಗೆ, ತಮ್ಮನ್ನು ತಾವು ವಿವಿಧ ಕಂಪನಿಗಳ ಹೆಚ್ ಆರ್ ಗಳ ಮುಂದೆ ಹೇಗೆ ನಿರೂಪಿಸಿಕೊಳ್ಳುವ ಬಗ್ಗೆ ತಿಳಿಸಿಕೊಡಲಾಗುತ್ತದೆ. ಸುಮಾರು 600ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಲೇ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಉದ್ಯೋಗ ಮೇಳಕ್ಕೆ ತಮ್ಮ ಹೆಸರನ್ನು ದಾಖಲಿಸಿಕೊಂಡಿದ್ದಾರೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಶ್ರೀ ಗೋಪಾಲಕೃಷ್ಣ ಭಟ್, ಗೌರವ ಅತಿಥಿಗಳಾಗಿ ಕೆ ಸತ್ಯೇಂದ್ರ ಪೈ, ಪ್ರೀತಮ್ ಪ್ರಸಾದ್ ಎಸ್ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ತ್ರಿಶಾ ವಿದ್ಯಾ ಕಾಲೇಜು ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಪ್ರಾಂಶುಪಾಲರಾದ ಪ್ರೊ. ವಿಘ್ನೇಶ್ ಶೆಣೈ, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುಲದೀಪ್ ವೈ ಯು, ಪ್ಲೇಸ್ಮೆಂಟ್ ವಿಭಾಗದ ಮುಖ್ಯಸ್ಥರಾದ ಆಲ್ಬನ್ ಉಪಸ್ಥಿತರಿರಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 6364872304 ಸಂಪರ್ಕಿಸಿಸಬಹುದಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುಲದೀಪ್ ವೈ ಯು, ಪ್ಲೇಸ್ಮೆಂಟ್ ವಿಭಾಗದ ಮುಖ್ಯಸ್ಥರಾದ ಆಲ್ಬನ್ ಆಂಥೋನಿ ಪಿರೆರಾ ಉಪಸ್ಥಿತರಿದ್ದರು.
