ಮೇ 17 (ಇಂದು) : ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಪದಪ್ರದಾನ ಸಮಾರಂಭ
Thumbnail

ಪಡುಬಿದ್ರಿ : ಇಲ್ಲಿನ ಗ್ರಾಮೀಣ ಕಾಂಗ್ರೆಸ್‌ ಇದರ ನೂತನ ಕಚೇರಿ ಉದ್ಘಾಟನೆ ಹಾಗೂ ಗ್ರಾಮೀಣ ಕಾಂಗ್ರೆಸ್‌ನ ನೂತನ ಅಧ್ಯಕ್ಷ ರಮೀಝ್ ಹುಸೇನ್ ಹಾಗೂ ಪದಾಧಿಕಾರಿಗಳ ಪದಾಪ್ರದಾನ ಸಮಾರಂಭ ಮೇ 17ರಂದು ನಡೆಯಲಿದೆ.

ಸಂಜೆ 6 ಗಂಟೆಗೆ ಸುಜಾತಾ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಮೀರಾ ಕಾಂಪ್ಲೆಕ್ಸ್‌ನಲ್ಲಿ ಕಚೇರಿಯ ಉದ್ಘಾಟನೆ ನಡೆಯಲಿದೆ. 

ಗ್ರಾಮೀಣ ಕಾಂಗ್ರೆಸ್‌ನ ಅಧ್ಯಕ್ಷ ಕರುಣಾಕರ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. 

ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾ‌ರ್ ಸೊರಕೆ ನೂತನ ಕಚೇರಿ ಉದ್ಘಾಟಿಸಲಿದ್ದಾರೆ. ಪ್ರಚಾರ ಸಮಿತಿಯ ಸಂಯೋಜಕ ಸುಧೀರ್ ಕುಮಾರ್ ಮುರೊಳ್ಳಿ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂ‌ರ್, ಜಿಲ್ಲಾಧ್ಯಕ್ಷ ಅಶೋಕ್‌ ಕುಮಾ‌ರ್ ಕೊಡವೂರು, ಕಾಪು ಬ್ಲಾಕ್ ಸಮಿತಿಯ ವೈ.ಸುಕುಮಾ‌ರ್, ಕೆಪಿಸಿಸಿ ಸಂಯೋಜಕ ನವೀನ್‌ಚಂದ್ರ ಜೆ.ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

17 May 2026, 09:02 AM
Category: Kaup
Tags: