ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಪಡುಬಿದ್ರಿ ಇಲ್ಲಿಯ ಸಮಗ್ರ ಜೀರ್ಣೋದ್ಧಾರ - ಪುನಃ ಪ್ರತಿಷ್ಠೆ - ಬ್ರಹ್ಮಕಲಶೋತ್ಸವದ ಸಂಕಲ್ಪದೊಂದಿಗೆ ಹಮ್ಮಿಕೊಂಡ ಭಜನೆ – ಸಂಕೀರ್ತನೆ - ಶಿವಪಂಚಾಕ್ಷರಿ ಜಪಯಜ್ಞ ದೀಪಾರಾಧನೆಯೊಂದಿಗೆ ಸಂಕಲ್ಪ – ಸಂಪನ್ನ – ಸಂಭ್ರಮ ಕಾರ್ಯಕ್ರಮವು ಭಾನುವಾರ ಪ್ರಾತ:ಕಾಲ ದೀಪ ಪ್ರಜ್ವಲನೆಯೊಂದಿಗೆ ಚಾಲನೆ ದೊರೆತು ದೀಪಾರಾಧನೆಯೊಂದಿಗೆ ಮುಕ್ತಾಯಗೊಂಡಿತು.
ಕಾರ್ಯಕ್ರಮವನ್ನು ಅನುವಂಶಿಕ ಮೊಕ್ತೇಸರರಾದ ಪಡುಬಿದ್ರಿ ಪೇಟೆಮನೆ ಭವಾನಿ ಶಂಕರ ಹೆಗ್ಡೆ ಹಾಗೂ ಕೊರ್ನಾಯ ಶ್ರೀಪತಿ ರಾವ್ ಉದ್ಘಾಟಿಸಿದರು.
ಬೆಳಿಗ್ಗೆ 6ರಿಂದ ಸಂಜೆ 6ರ ವರೆಗೆ ಸ್ಥಳೀಯ ಆಹ್ವಾನಿತ 12 ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಜರಗಿತು. ಭಕ್ತ ಜನರ ಸೇರುವಿಕೆಯೊಂದಿಗೆ ಸಂಜೆ ದೀಪಾರಾಧನೆಯು ಜರಗಿತು.
ಅದಮಾರು ಮಠದ ಶ್ರೀ ಶ್ರೀ ಈಶಪ್ರಿಯ ಸ್ವಾಮೀಜಿ ಆಶೀರ್ವಚಿಸಿದರು.
ಗಾಯಕಿ ಶಾಂತೇರಿ ಲಿಖಿತ್ ಪ್ರಭು, ಮಂಜೇಶ್ವರ ಮತ್ತು ಬಳಗದವರಿಂದ ಭಜನ್ ಸಂಧ್ಯಾ ಕಾರ್ಯಕ್ರಮವೂ ಜರಗಿತು.
ವೇದಮೂರ್ತಿ ಅಚ್ಚಡ ಶ್ರೀನಿವಾಸ ಆಚಾರ್ಯ ಮತ್ತು ಭಜನೆ, ಸಂಕೀರ್ತನೆ, ಶಿವಪಂಚಾಕ್ಷರಿ ಜಪಯಜ್ಞ ದೀಪಾರಾಧನೆಯಲ್ಲಿ ಸಹಕರಿಸಿದವರನ್ನು, ಶಾಂತೇರಿ ಲಿಖಿತ್ ಪ್ರಭು, ಮಂಜೇಶ್ವರ ಮತ್ತು ಬಳಗದವರನ್ನು ಗೌರವಿಸಲಾಯಿತು.
ಈ ಸಂದರ್ಭ ಅರ್ಚಕರುಗಳಾದ ಎಚ್. ಪದ್ಮನಾಭ ಭಟ್, ಗುರುರಾಜ್ ಭಟ್, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾದ ರವೀಂದ್ರನಾಥ್ ಜಿ. ಹೆಗ್ಡೆ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾವಡ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಶ್ರೀನಾಥ್ ಹೆಗ್ಡೆ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳೀನಾಥ್ ಶೆಟ್ಟಿ, ಡಾ.ಎನ್.ಟಿ.ಅಂಚನ್, ಸುಚರಿತ ಅಂಚನ್, ಪ್ರಕಾಶ್ ದೇವಾಡಿಗ, ರಮಾಕಾಂತ ರಾವ್, ವೈ. ಸುರೇಶ್ ರಾವ್, ನಟರಾಜ ರಾವ್ ಪಿ.ಎಸ್., ಪಿ.ರಮಾಕಾಂತ ರಾವ್, ಸುಧಾ ಆರ್. ನಾವಡ, ಕಸ್ತೂರಿ ರಾಮಚಂದ್ರ, ರಾಜೇಂದ್ರ ಶೆಣೈ, ದೇವಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶ್ರೀಧರ ಆಚಾರ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
