ಶಿರ್ವ ಸಹಕಾರಿ ವ್ಯವಸಾಯಿಕ ಸಂಘದಿಂದ ಸಂಸದರಿಗೆ ಮನವಿ
Thumbnail

ಶಿರ್ವ : ಇಲ್ಲಿನ ಸಹಕಾರಿ ವ್ಯವಸಾಯಿಕ ಸಂಘ ನಿ. ಶಿರ್ವ ವತಿಯಿಂದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಯವರ ನೇತೃತ್ವದಲ್ಲಿ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ನಬಾರ್ಡ್ ಸಂಸ್ಥೆಯು ಕೃಷಿಕರಿಗಾಗಿ ಒದಗಿಸುವ ಶೂನ್ಯ ಬಡ್ಡಿ ದರದ MKCC ಸಾಲದ ಮಿತಿ ನಿಗದಿಪಡಿಸಲು  ವಿಧಿಸಿದ ಷರತ್ತುಗಳ ಅನ್ವಯ  ಈ ಹಿಂದಿನ ಮೊತ್ತದ ಸಾಲವನ್ನು ವಿತರಿಸಲು ಸಾಧ್ಯವಾಗುತ್ತಿಲ್ಲ. ಆದುದರಿಂದ ಕಾರ್ಯವ್ಯಾಪ್ತಿಯ ಮಲ್ಲಿಗೆ ಕೃಷಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟು ಈ ಹಿಂದಿನಂತೆಯೇ ಸಾಲ ವಿತರಿಸಲು ಅನುಕೂಲ ಮಾಡಿಕೊಡುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಮನವರಿಕೆ ಮಾಡುವಂತೆ ವಿನಂತಿಸಲಾಯಿತು.

 ನಿಯೋಗದಲ್ಲಿ ಸಂಘದ ಉಪಾಧ್ಯಕ್ಷರಾದ ವೀರೇಂದ್ರ ಪಾಟ್ಕರ್, ನಿರ್ದೇಶಕರಾದ ಉಮೇಶ್ ಆಚಾರ್ಯ ಮತ್ತು ಹರಿಣಾಕ್ಷ ಶೆಟ್ಟಿಯವರು ಉಪಸ್ಥಿತರಿದ್ದರು.

03 Jul 2026, 12:52 PM
Category: Kaup
Tags: