ಬಂಟಕಲ್ಲು : ವಿಕಾಸ ಸೇವಾ ಸಮಿತಿ ಮತ್ತು ಹೇರೂರು ಫ್ರೆಂಡ್ಸ್ 92ನೇ ಹೇರೂರು ಇದರ ಜಂಟಿ ಆಶ್ರಯದಲ್ಲಿ 92ನೇ ಹೇರೂರು ಶ್ರೀ ಗುರು ರಾಘವೇಂದ್ರ ಸಮಾಜಸೇವಾ ಮಂಡಳಿಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ತೇರ್ಗಡೆಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ವಿಕಾಸ ಸೇವಾ ಸಮಿತಿಯ ಅಧ್ಯಕ್ಷ ಮಾದವಾಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ಕಾಪು ವಲಯ ಅರಣ್ಯ ಅಧಿಕಾರಿ ಮಲ್ಲಿಕಾರ್ಜುನ್, ಅರಣ್ಯ ಪಾಲಕರಾದ ಶ್ರೀನಿವಾಸ್ ಕೋಟ, ಅಖಿಲೇಶ್, ಗುರುರಾಘವೇಂದ್ರ ಸಮಾಜ ಸೇವಾ ಮಂಡಳಿಯ ಅಧ್ಯಕ್ಷ ರಾಘವೇಂದ್ರ ಸ್ವಾಮಿ, ಹೇರೂರು ಫ್ರೆಂಡ್ಸ್ ನ ಅಧ್ಯಕ್ಷ ರಾಜೇಶ್ ದೇವಾಡಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುಮಾರು 17 ಜನ ವಿದ್ಯಾರ್ಥಿಗಳು ಅಭಿನಂದನೆಯನ್ನು ಸ್ವೀಕರಿಸಿದರು. ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸಿ ಅದರ ಮಹತ್ವಗಳನ್ನು ತಿಳಿಸಲಾಯಿತು.
ದಿಶಾ ಪಾಟ್ಕರ್ ಪ್ರಾರ್ಥಿಸಿದರು. ಹೇರೂರು ಫ್ರೆಂಡ್ಸ್ ನ ಉಪಾಧ್ಯಕ್ಷ ವಿಜಯ ಧೀರಜ್ ಸ್ವಾಗತಿಸಿದರು. ರಾಜೇಶ್ ಜೋಗಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
