ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಕಾಪು ತಾಲೂಕು ವತಿಯಿಂದ ಶ್ರೀರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಮಜೂರು ಕರಂದಾಡಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಆರ್ ಎಸ್ ಕಲ್ಲೂರ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾದ ಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ನಿರ್ಮಲ್ ಕುಮಾರ್ ಹೆಗ್ಡೆ
ಯವರು, ಪರಿಸರದ ಜಾಗೃತಿ
ಯ ಬಗ್ಗೆ ಭೂಮಂಡಲದಲ್ಲಿ ಇರುವಂತಹ ಪರಿಸರದಲ್ಲಿ ಮನುಷ್ಯನ ಜೊತೆಗೆ ಪ್ರತಿಯೊಂದು ಪ್ರಾಣಿ ಪಕ್ಷಿ ಸಂಕುಲಗಳು , ಜಲಚರ ಜೀವಿಗಳು ಜೀವಿಸುತ್ತಿದ್ದು, ನಾವೆಲ್ಲರೂ ಪರಿಸರಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ, ಮರಗಳನ್ನು ಬೆಳೆಸಿ, ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಿ ಜಲ ಹಾಗೂ ವಾಯು ಮಾಲಿನ್ಯವನ್ನು ತಡೆಗಟ್ಟಿದರೆ ಮಾತ್ರ ಮುಂದಿನ ಪೀಳಿಗೆಗೆ ಆರೋಗ್ಯಕರ ಭೂಮಿಯನ್ನು ನೀಡಲು ಸಾಧ್ಯಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪದ್ಮನಾಭ ಶಾನುಭೋಗ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಾಸುದೇವ ರಾವ್, ಒಕ್ಕೂಟದ ಅಧ್ಯಕ್ಷರಾದ ಪ್ರಸಾದ್ ಆಚಾರ್ಯ, ಸದಸ್ಯರಾದ ಸದಾಶಿವ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ರವಿರಾಜ್ ಶೆಟ್ಟಿ, ಜನ ಜಾಗ್ರತಿ ವೇದಿಕೆ ಸದಸ್ಯರಾದ ನಾಗಭೂಷಣ್ ರಾವ್, ಕಲ್ಪವೃಕ್ಷ ಕನ್ನಡ ಶಾಲಾ ಸಮಿತಿ ಕಾರ್ಯದರ್ಶಿ ಅಶ್ರಫ್, ವಲಯ ಮೇಲ್ವಿಚಾರಕರಾದ ವಿನುತ, ಕೃಷಿ ಮೇಲ್ವಿಚಾರಕರಾದ ದೇವೇಂದ್ರ, ಸೇವಾ ಪ್ರತಿನಿಧಿ ರಜನಿ, ಮಮ್ತಾಜ್, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
